BREAKING NEWS

ಪ್ರಧಾನಿ ಮೋದಿಯನ್ನು ಯಾರಿಂದಲೂ ಹೆದರಿಸಲು ಸಾಧ್ಯವಿಲ್ಲ: ವ್ಲಾಡಿಮಿರ್ ಪುಟಿನ್

ಮಾಸ್ಕೋ : ಭಾರತ ಮತ್ತು ಭಾರತೀಯರಿಗೆ ಹಿತಾಸಕ್ತಿಗೆ ಧಕ್ಕೆ ತರಬಲ್ಲ ಯಾವುದೇ ಕ್ರಮ ಅಥವಾ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಯಾರೂ ಹೆದರಿಸಲು ಸಾಧ್ಯವಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಹೇಳಿದ್ದಾರೆ.

ರಷ್ಯಾದ ಮಾಸ್ಕೋದಲ್ಲಿ ನಡೆದ ʼರಷ್ಯಾ ಕಾಲಿಂಗ್‌ʼ ಹೂಡಿಕೆ ವೇದಿಕೆಯಲ್ಲಿ ಪ್ರಧಾನಿ ಮೋದಿ ಅವರ ನಾಯಕತ್ವದ ಕುರಿತು ಮಾತನಾಡಿದ ಪುಟಿನ್‌, ಭಾರತದ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿ ನಿರ್ಧಾರ ತೆಗೆದುಕೊಳ್ಳುವಂತೆ ಬಲವಂತಪಡಿಸಬಹುದು. ಆದರೆ, ಅಂತಹ ಒತ್ತಡಗಳನ್ನು ಅವರು ಸಲೀಸಾಗಿ ನಿಭಾಯಿಸುತ್ತಾರೆ. ಇದನ್ನು ಯಾರು ಊಹಿಸಲು ಸಾಧ್ಯವಿಲ್ಲ. ನಾನು ಸದಾ ಗಮನಿಸುತ್ತಿರುತ್ತೇನೆ, ಭಾರತ ಹಿತಾಸಕ್ತಿಗಳನ್ನು ರಕ್ಷಿಸುವ ಅವರ ಕಠಿಣ ನಿರ್ಧಾರಗಳು ನನ್ನನ್ನು ಆಶ್ಚರ್ಯಚಕಿತಗೊಳಿಸುತ್ತದೆ. ಅವರು ಎಂದಿಗೂ ಬಾಹ್ಯ ಒತ್ತಡಗಳ ಬಗ್ಗೆ ನನ್ನೊಂದಿಗೆ ಚರ್ಚಿಸಿಲ್ಲ.

ಮಾಸ್ಕೋದಲ್ಲಿ ನಡೆದ ʼರಷ್ಯಾ ಕಾಲಿಂಗ್ʼ ಹೂಡಿಕೆ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಕುರಿತು ಮಾತನಾಡುತ್ತಾ, ‘ಮೋದಿಯವರನ್ನು ಯಾರೂ ಭಾರತದ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧ ನಿರ್ಧಾರ ತೆಗೆದುಕೊಳ್ಳುವಂತೆ ಬಲವಂತಪಡಿಸಬಹುದು, ಅಂಥ ಒತ್ತಡವನ್ನು ಅವರು ಅನುಭವಿಸಬಹುದು ಎಂದು ಊಹಿಸಲು ಸಾಧ್ಯವಿಲ್ಲ. ನಾನು ಸದಾ ಗಮನಿಸುತ್ತಿರುತ್ತೇನೆ, ಭಾರತೀಯ ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸುವ ಅವರ ಕಠಿಣ ನಿಲುವು ನನಗೆ ಆಶ್ಚರ್ಯಕರವಾಗಿದೆ. ʼಸ್ನೇಹರಹಿತ ದೇಶಗಳʼ ಬಾಹ್ಯ ಒತ್ತಡದ ನಡುವೆಯೂ ಪ್ರಧಾನಿ ನರೇಂದ್ರ ಮೋದಿಯವರ ದೃಢವಾದ ನಾಯಕತ್ವ ಭಾರತಕ್ಕೆ ದೊರೆತಿದೆ. ಅವರು ಎಂದಿಗೂ ಬಾಹ್ಯ ಒತ್ತಡಗಳ ಬಗ್ಗೆ ತನ್ನೊಂದಿಗೆ ಮಾತನಾಡಿಯೇ ಇಲ್ಲ ಎಂದು ಶ್ಲಾಘಿಸಿದ್ದಾರೆ.

ಜೊತೆಗೆ ಭಾರತ- ರಷ್ಯಾ ಬಾಂಧವ್ಯವು ಎಲ್ಲಾ ರಂಗಗಳಲ್ಲಿ ಪ್ರಗತಿಯಲ್ಲಿದೆ. ಉಭಯ ದೇಶಗಳ ನಡುವಿನ ಸಂಬಂಧಗಳು ಎಲ್ಲಾ ಪಥಗಳಲ್ಲಿ ಪ್ರಗತಿಪರವಾಗಿ ಅಭಿವೃದ್ಧಿ ಹೊಂದುತ್ತಿವೆ. ಇದರ ಮುಖ್ಯ ಭರವಸೆ ಪ್ರಧಾನಿ ಮೋದಿ ಅವರು ಅನುಸರಿಸುತ್ತಿರುವ ನೀತಿಯಾಗಿದೆ ಎಂದು ಪುಟಿನ್ ಹೇಳಿದ್ದಾರೆ.

ಟ್ವಿಟರ್ ನಲ್ಲಿ ಈ ಕುರಿತು 45 ಸೆಕೆಂಡ್‌ಗಳ ಈ ಸಂದರ್ಶನದ ವಿಡಿಯೋ ಅಪ್ಲೋಡ್ ಆಗಿದ್ದು, ಲಕ್ಷಾಂತರ ವೀಕ್ಷಣೆ ಪಡೆದಿದೆ. ಎರಡು ದಿನಗಳ ʼಮಾಸ್ಕೋ ಕಾಲಿಂಗ್‌ʼ ಇವೆಂಟ್‌ನಲ್ಲಿ ಚೀನಾ, ಭಾರತ, ಟರ್ಕಿ, ಗಲ್ಫ್ ದೇಶಗಳು, ಮಧ್ಯಪ್ರಾಚ್ಯ, ಆಫ್ರಿಕಾ ಮತ್ತು ಏಷ್ಯಾದ ಪ್ರತಿನಿಧಿಗಳು ಭಾಗವಹಿಸಿದ್ದಾರೆ.

https://x.com/AdityaRajKaul/status/1732884199047385427?s=20

andolanait

Recent Posts

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…

24 mins ago

ಓದುಗರ ಪತ್ರ: ಜನರ ನಿರೀಕ್ಷೆಗಳಿಂದ ದೂರವಾಗುತ್ತಿರುವ ಶಾಸನಸಭೆಗಳು

ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…

26 mins ago

ಓದುಗರ ಪತ್ರ: ಬೇಸರ ತರಿಸಿದ ಜನಪ್ರತಿನಿಧಿಗಳ ವರ್ತನೆ

ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…

29 mins ago

ಸೈನ್ಯ ಯುದ್ಧ ಮಾಡುತ್ತದೆ, ತೀರ್ಮಾನ ಸರ್ಕಾರ ಮಾಡಬೇಕು…!

ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…

31 mins ago

ಇಂದು ಶನಿವಾರಸಂತೆ ಬಸ್ ನಿಲ್ದಾಣ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…

39 mins ago

ಮಡಹಳ್ಳಿ ಬಳಿಯ ಅಕ್ರಮ ಕ್ರಷರ್‌ನಿಂದ ಜನತೆ ಹೈರಾಣ

ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…

44 mins ago