BREAKING NEWS

ಪ್ರಧಾನಿ ಮೋದಿಯನ್ನು ಯಾರಿಂದಲೂ ಹೆದರಿಸಲು ಸಾಧ್ಯವಿಲ್ಲ: ವ್ಲಾಡಿಮಿರ್ ಪುಟಿನ್

ಮಾಸ್ಕೋ : ಭಾರತ ಮತ್ತು ಭಾರತೀಯರಿಗೆ ಹಿತಾಸಕ್ತಿಗೆ ಧಕ್ಕೆ ತರಬಲ್ಲ ಯಾವುದೇ ಕ್ರಮ ಅಥವಾ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಯಾರೂ ಹೆದರಿಸಲು ಸಾಧ್ಯವಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಹೇಳಿದ್ದಾರೆ.

ರಷ್ಯಾದ ಮಾಸ್ಕೋದಲ್ಲಿ ನಡೆದ ʼರಷ್ಯಾ ಕಾಲಿಂಗ್‌ʼ ಹೂಡಿಕೆ ವೇದಿಕೆಯಲ್ಲಿ ಪ್ರಧಾನಿ ಮೋದಿ ಅವರ ನಾಯಕತ್ವದ ಕುರಿತು ಮಾತನಾಡಿದ ಪುಟಿನ್‌, ಭಾರತದ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿ ನಿರ್ಧಾರ ತೆಗೆದುಕೊಳ್ಳುವಂತೆ ಬಲವಂತಪಡಿಸಬಹುದು. ಆದರೆ, ಅಂತಹ ಒತ್ತಡಗಳನ್ನು ಅವರು ಸಲೀಸಾಗಿ ನಿಭಾಯಿಸುತ್ತಾರೆ. ಇದನ್ನು ಯಾರು ಊಹಿಸಲು ಸಾಧ್ಯವಿಲ್ಲ. ನಾನು ಸದಾ ಗಮನಿಸುತ್ತಿರುತ್ತೇನೆ, ಭಾರತ ಹಿತಾಸಕ್ತಿಗಳನ್ನು ರಕ್ಷಿಸುವ ಅವರ ಕಠಿಣ ನಿರ್ಧಾರಗಳು ನನ್ನನ್ನು ಆಶ್ಚರ್ಯಚಕಿತಗೊಳಿಸುತ್ತದೆ. ಅವರು ಎಂದಿಗೂ ಬಾಹ್ಯ ಒತ್ತಡಗಳ ಬಗ್ಗೆ ನನ್ನೊಂದಿಗೆ ಚರ್ಚಿಸಿಲ್ಲ.

ಮಾಸ್ಕೋದಲ್ಲಿ ನಡೆದ ʼರಷ್ಯಾ ಕಾಲಿಂಗ್ʼ ಹೂಡಿಕೆ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಕುರಿತು ಮಾತನಾಡುತ್ತಾ, ‘ಮೋದಿಯವರನ್ನು ಯಾರೂ ಭಾರತದ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧ ನಿರ್ಧಾರ ತೆಗೆದುಕೊಳ್ಳುವಂತೆ ಬಲವಂತಪಡಿಸಬಹುದು, ಅಂಥ ಒತ್ತಡವನ್ನು ಅವರು ಅನುಭವಿಸಬಹುದು ಎಂದು ಊಹಿಸಲು ಸಾಧ್ಯವಿಲ್ಲ. ನಾನು ಸದಾ ಗಮನಿಸುತ್ತಿರುತ್ತೇನೆ, ಭಾರತೀಯ ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸುವ ಅವರ ಕಠಿಣ ನಿಲುವು ನನಗೆ ಆಶ್ಚರ್ಯಕರವಾಗಿದೆ. ʼಸ್ನೇಹರಹಿತ ದೇಶಗಳʼ ಬಾಹ್ಯ ಒತ್ತಡದ ನಡುವೆಯೂ ಪ್ರಧಾನಿ ನರೇಂದ್ರ ಮೋದಿಯವರ ದೃಢವಾದ ನಾಯಕತ್ವ ಭಾರತಕ್ಕೆ ದೊರೆತಿದೆ. ಅವರು ಎಂದಿಗೂ ಬಾಹ್ಯ ಒತ್ತಡಗಳ ಬಗ್ಗೆ ತನ್ನೊಂದಿಗೆ ಮಾತನಾಡಿಯೇ ಇಲ್ಲ ಎಂದು ಶ್ಲಾಘಿಸಿದ್ದಾರೆ.

ಜೊತೆಗೆ ಭಾರತ- ರಷ್ಯಾ ಬಾಂಧವ್ಯವು ಎಲ್ಲಾ ರಂಗಗಳಲ್ಲಿ ಪ್ರಗತಿಯಲ್ಲಿದೆ. ಉಭಯ ದೇಶಗಳ ನಡುವಿನ ಸಂಬಂಧಗಳು ಎಲ್ಲಾ ಪಥಗಳಲ್ಲಿ ಪ್ರಗತಿಪರವಾಗಿ ಅಭಿವೃದ್ಧಿ ಹೊಂದುತ್ತಿವೆ. ಇದರ ಮುಖ್ಯ ಭರವಸೆ ಪ್ರಧಾನಿ ಮೋದಿ ಅವರು ಅನುಸರಿಸುತ್ತಿರುವ ನೀತಿಯಾಗಿದೆ ಎಂದು ಪುಟಿನ್ ಹೇಳಿದ್ದಾರೆ.

ಟ್ವಿಟರ್ ನಲ್ಲಿ ಈ ಕುರಿತು 45 ಸೆಕೆಂಡ್‌ಗಳ ಈ ಸಂದರ್ಶನದ ವಿಡಿಯೋ ಅಪ್ಲೋಡ್ ಆಗಿದ್ದು, ಲಕ್ಷಾಂತರ ವೀಕ್ಷಣೆ ಪಡೆದಿದೆ. ಎರಡು ದಿನಗಳ ʼಮಾಸ್ಕೋ ಕಾಲಿಂಗ್‌ʼ ಇವೆಂಟ್‌ನಲ್ಲಿ ಚೀನಾ, ಭಾರತ, ಟರ್ಕಿ, ಗಲ್ಫ್ ದೇಶಗಳು, ಮಧ್ಯಪ್ರಾಚ್ಯ, ಆಫ್ರಿಕಾ ಮತ್ತು ಏಷ್ಯಾದ ಪ್ರತಿನಿಧಿಗಳು ಭಾಗವಹಿಸಿದ್ದಾರೆ.

https://x.com/AdityaRajKaul/status/1732884199047385427?s=20

andolanait

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

33 mins ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

2 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

2 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

2 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

2 hours ago