ದಾವಣಗೆರೆ: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಐದು ವರ್ಷ ಆಡಳಿತ ಮಾಡುತ್ತಾರೆ. ಅವರು ಅವಧಿ ಪೂರೈಸುವ ವಿಶ್ವಾಸ ಇದೆ. ಎರಡೂವರೆ ವರ್ಷ ಅಧಿಕಾರ ಹಂಚಿಕೆಯಾಗಿದೆ ಎಂಬುದರಲ್ಲಿ ಹುರುಳಿಲ್ಲ. ಅರ್ಧಕ್ಕೆ ಬಿಟ್ಟುಕೊಡುವ ಕುರಿತಂತೆ ಯಾರೂ ಸೂಚನೆ ನೀಡಿಲ್ಲ ಎಂದು ಲೋಕೋಪಯೋಗಿ ಸಚಿವ ಹಾಗೂ ಸಿದ್ದರಾಮಯ್ಯರ ಆಪ್ತ ಸತೀಶ್ ಜಾರಕಿಹೊಳಿ ತಿಳಿಸಿದರು.
ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಪೀಠದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿಎಂ ಸ್ಥಾನ ಇದುವರೆಗೂ ಅರ್ಧಕ್ಕೆ ಅಂತ ಯಾರೂ ಹೇಳಿಲ್ಲ, ಅದ್ದರಿಂದ ಅವರೇ ಮುಂದುವರೆಯುತ್ತಾರೆ ಎನ್ನುವ ವಿಶ್ವಾಸ ಇದೆ, ಅದು ಪಕ್ಷದ ತೀರ್ಮಾನಕ್ಕೆ ಬಿಟ್ಟ ವಿಚಾರ ಎಂದರು.
ಅಕ್ಕಿ ಖರೀದಿ ವಿಚಾರಕ್ಕೆ ಸಂಬಂಧಿಸಿದ್ದಂತೆ ಸಣ್ಣ ಪುಟ್ಟ ಸಮಸ್ಯೆಗಳಿವೆ. ಸದ್ಯದಲ್ಲಿಯೇ ಎಲ್ಲವನ್ನೂ ಸರಿಪಡಿಸುತ್ತೇವೆ. ವಿರೋಧಪಕ್ಷ ಬಿಜೆಪಿಯವರು ವಿನಾಕಾರಣ ಜನರಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಹೋರಾಟ ಮಾಡುವುದು, ಬಿಡುವುದು ಆ ಪಕ್ಷಕ್ಕೆ ಬಿಟ್ಟ ವಿಚಾರ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು 15 ಲಕ್ಷ ರೂಪಾಯಿ ಅಕೌಂಟ್ ಗೆ ಹಾಕಲಾಗುವುದು ಎಂಬ ಭರವಸೆ ನೀಡಿ 9 ವರ್ಷಗಳ ಮೇಲಾಯ್ತು. ಆದ್ರೂ ಇದುವರೆಗೂ ನಯಾಪೈಸೆ ಕೂಡ ಬಂದಿಲ್ಲ. ವಿದೇಶಗಳ ಬ್ಯಾಂಕ್ ನಲ್ಲಿ ಇಟ್ಟಿರುವ ಕಪ್ಪು ಹಣ ತರುತ್ತೇವೆ ಎಂದಿದ್ದರು. ಇಷ್ಟು ವರ್ಷವಾದರೂ ತರಲು ಆಗಿಲ್ಲ. ಅವರು ನೀಡಿದ್ದ 10 ಭರವಸೆಗಳು ಹಾಗೆಯೇ ಉಳಿದಿವೆ ಎಂದು ಆರೋಪಿಸಿದರು.
ಸಮಸ್ಯೆಗಳನ್ನು ಸರಿಪಡಿಸಲು ಕಾಲಾವಕಾಶ ಬೇಕು. ಎಲ್ಲವನ್ನೂ ಒಮ್ಮೆಲೆ ಸರಿಪಡಿಸುತ್ತೇವೆ ಎಂದರೆ ಆಗದು. ಬಿಜೆಪಿಯವರು ಪಠ್ಯ ಪರಿಷ್ಕರಣ ಮಾಡಿದ್ದು, ಶಿಕ್ಷಣ ನೀತಿಗೆ ವಿರುದ್ಧವಾಗಿದೆ. ಅದನ್ನು ಬದಲಾವಣೆ ಮಾಡ್ತೀವಿ ಎಂದು ಹೇಳಿದ್ದೇವೆ, ಬದಲಾವಣೆ ಮಾಡುತ್ತೇವೆ, ಇದರಲ್ಲಿ ಗೊಂದಲ ಇಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…
ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…
ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್ಗೆ…
ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಕೇಂದ್ರ ಸರ್ಕಾರದ ವಿರುದ್ಧ…
ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್…
ನಟ ದರ್ಶನ್ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಬೆಂಗಳೂರಿನ…