BREAKING NEWS

ಸಿಎಂ ಸ್ಥಾನ ಅರ್ಧಕ್ಕೆ ಬಿಟ್ಟುಕೊಡುವಂತೆ ಯಾರೂ ಸೂಚನೆ ಕೊಟ್ಟಿಲ್ಲ: ಸತೀಶ್ ಜಾರಕಿಹೊಳಿ

ದಾವಣಗೆರೆ: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಐದು ವರ್ಷ ಆಡಳಿತ ಮಾಡುತ್ತಾರೆ. ಅವರು ಅವಧಿ ಪೂರೈಸುವ ವಿಶ್ವಾಸ ಇದೆ. ಎರಡೂವರೆ ವರ್ಷ ಅಧಿಕಾರ ಹಂಚಿಕೆಯಾಗಿದೆ ಎಂಬುದರಲ್ಲಿ ಹುರುಳಿಲ್ಲ. ಅರ್ಧಕ್ಕೆ ಬಿಟ್ಟುಕೊಡುವ ಕುರಿತಂತೆ ಯಾರೂ ಸೂಚನೆ ನೀಡಿಲ್ಲ ಎಂದು ಲೋಕೋಪಯೋಗಿ ಸಚಿವ ಹಾಗೂ ಸಿದ್ದರಾಮಯ್ಯರ ಆಪ್ತ ಸತೀಶ್‌ ಜಾರಕಿಹೊಳಿ ತಿಳಿಸಿದರು.

ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಪೀಠದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿಎಂ ಸ್ಥಾನ ಇದುವರೆಗೂ ಅರ್ಧಕ್ಕೆ ಅಂತ ಯಾರೂ ಹೇಳಿಲ್ಲ, ಅದ್ದರಿಂದ ಅವರೇ ಮುಂದುವರೆಯುತ್ತಾರೆ ಎನ್ನುವ ವಿಶ್ವಾಸ ಇದೆ, ಅದು ಪಕ್ಷದ ತೀರ್ಮಾನಕ್ಕೆ ಬಿಟ್ಟ ವಿಚಾರ ಎಂದರು.

ಅಕ್ಕಿ ಖರೀದಿ ವಿಚಾರಕ್ಕೆ ಸಂಬಂಧಿಸಿದ್ದಂತೆ ಸಣ್ಣ ಪುಟ್ಟ ಸಮಸ್ಯೆಗಳಿವೆ. ಸದ್ಯದಲ್ಲಿಯೇ ಎಲ್ಲವನ್ನೂ ಸರಿಪಡಿಸುತ್ತೇವೆ. ವಿರೋಧಪಕ್ಷ ಬಿಜೆಪಿಯವರು ವಿನಾಕಾರಣ ಜನರಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಹೋರಾಟ ಮಾಡುವುದು, ಬಿಡುವುದು ಆ ಪಕ್ಷಕ್ಕೆ ಬಿಟ್ಟ ವಿಚಾರ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು 15 ಲಕ್ಷ ರೂಪಾಯಿ ಅಕೌಂಟ್ ಗೆ ಹಾಕಲಾಗುವುದು ಎಂಬ ಭರವಸೆ ನೀಡಿ 9 ವರ್ಷಗಳ ಮೇಲಾಯ್ತು. ಆದ್ರೂ ಇದುವರೆಗೂ ನಯಾಪೈಸೆ ಕೂಡ ಬಂದಿಲ್ಲ. ವಿದೇಶಗಳ ಬ್ಯಾಂಕ್ ನಲ್ಲಿ ಇಟ್ಟಿರುವ ಕಪ್ಪು ಹಣ ತರುತ್ತೇವೆ ಎಂದಿದ್ದರು. ಇಷ್ಟು ವರ್ಷವಾದರೂ ತರಲು ಆಗಿಲ್ಲ. ಅವರು ನೀಡಿದ್ದ 10 ಭರವಸೆಗಳು ಹಾಗೆಯೇ ಉಳಿದಿವೆ ಎಂದು ಆರೋಪಿಸಿದರು.

ಸಮಸ್ಯೆಗಳನ್ನು ಸರಿಪಡಿಸಲು ಕಾಲಾವಕಾಶ ಬೇಕು. ಎಲ್ಲವನ್ನೂ ಒಮ್ಮೆಲೆ ಸರಿಪಡಿಸುತ್ತೇವೆ ಎಂದರೆ ಆಗದು. ಬಿಜೆಪಿಯವರು ಪಠ್ಯ ಪರಿಷ್ಕರಣ ಮಾಡಿದ್ದು, ಶಿಕ್ಷಣ ನೀತಿಗೆ ವಿರುದ್ಧವಾಗಿದೆ. ಅದನ್ನು ಬದಲಾವಣೆ ಮಾಡ್ತೀವಿ ಎಂದು ಹೇಳಿದ್ದೇವೆ, ಬದಲಾವಣೆ ಮಾಡುತ್ತೇವೆ, ಇದರಲ್ಲಿ ಗೊಂದಲ ಇಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

6 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

6 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

6 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

6 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

6 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

6 hours ago