ಬೆಂಗಳೂರು: ಕಾವೇರಿ ವಿಚಾರವಾಗಿ ಕರ್ನಾಟಕ ಬಂದ್ ಗೆ ಅವಕಾಶವಿಲ್ಲ, ಆದರೆ ಪ್ರತಿಭಟನೆಗೆ ಅಡ್ಡಿ ಉಂಟು ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಕರ್ನಾಟಕ ಬಂದ್ಗೆ ಕರೆ ನೀಡಿದ ಹಿನ್ನೆಲೆ ನಾವು ಪ್ರತಿಭಟನಾಕಾರರಿಗೆ ಅಡ್ಡಿ ಮಾಡುವುದಿಲ್ಲ. ಆದರೆ, ನಾವು ಸಾರ್ವಜನಿಕರನ್ನು ರಕ್ಷಣೆ ಮಾಡಲೇಬೇಕು. ನಾವು ಜನತೆಗೆ ರಕ್ಷಣೆ ಕೊಟ್ಟೇ ಕೊಡ್ತೀವಿ ಎಂದರು.
ಸುಪ್ರೀಂ ಕೋರ್ಟ್ ಬಂದ್ ಮಾಡಬಾರದು ಅಂತ ಹೇಳಿದೆ. ಹೀಗಾಗಿ ಬಂದ್ ಮಾಡಲು ಅವಕಾಶ ಇಲ್ಲ. ಶುಕ್ರವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮೀಟಿಂಗ್ ಇದೆ, ನಮ್ಮ ಅಧಿಕಾರಿಗಳಿಗೆ ವರ್ಚುಯಲ್ ಮೂಲಕ ಬೇಡ, ನೀವೇ ಖುದ್ದು ಹಾಜರಾಗಿ ಅಂತ ಹೇಳಿದ್ದೇವೆ ಎಂದು ತಿಳಿಸಿದರು.
ಸಿಎಂ ಅಧ್ಯಕ್ಷತೆಯಲ್ಲಿ ಕಾನೂನು ತಜ್ಞರು, ಹಿರಿಯರ ಸಭೆ ಮಾಡ್ತೀವಿ. ಈಗ ಎರಡು ಸಾವಿರ ಕ್ಯೂಸೆಕ್ ಹೋಗ್ತಿರಬಹುದು. ನಾಳೆ ಮೀಟಿಂಗ್ ತೀರ್ಪು ನೋಡಿಕೊಂಡು ಕೋರ್ಟ್ಗೆ ಹೋಗ್ತೀವಿ ಎಂದರು.
ಇತರ ಪಕ್ಷಗಳ ನಾಯಕರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸಿಎಂ ಸಿದ್ದರಾಮಯ್ಯ ಬಳಿ ಮಾತುಕತೆ ನಡೆಸುತ್ತೇನೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಬಗ್ಗೆ ಸಾಕಷ್ಟು ಜನರಿಗೆ ಆಕ್ರೋಶ ಇದೆ. ನಮ್ಮ ಪಕ್ಷದ ನಿಲುವಿನ ಬಗ್ಗೆ ನಾವು ಮೊದಲು ಮಾತನಾಡಿ ನಂತರದಲ್ಲಿ ಮುಂದಿನ ನಿರ್ಧಾರಕ್ಕೆ ಬರುತ್ತೇವೆ ಎಂದರು.
ಜೊತೆಗೆ ನಿಗಮ ಮಂಡಳಿ ನೇಮಕಾತಿ ವಿಚಾರವಾಗಿ ಸಚಿವ ಕೆ.ಎಚ್ ಮುನಿಯಪ್ಪ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆಯೂ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಪದವೀಧರ, ಶಿಕ್ಷಕರ ಕ್ಷೇತ್ರದ ಎಂಎಲ್ಸಿ ಚುನಾವಣೆ ಬಗ್ಗೆ ಮಾತಾಡುತ್ತಿದ್ದೇನೆ. ಹಿರಿಯ ನಾಯಕರನ್ನು ಕರೆದು ಈ ಕುರಿತಾಗಿ ಮಾತಾಡುತ್ತಿದ್ದೇನೆ. ಸಚಿವರಾದ ಈಶ್ವರ್ ಖಂಡ್ರೆ, ಪ್ರಿಯಾಂಕ್, ರಾಮಲಿಂಗರೆಡ್ಡಿ ಅವರ ಜೊತೆ ಮಾತಾಡುತ್ತಿದ್ದೇನೆ. ಎಲೆಕ್ಷನ್ ಗೆ ನಾವು ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕಿದೆ ಎಂದರು.
ಇನ್ನು ಇದೇ ವೇಳೆ ಬಿ.ಕೆ ಹರಿಪ್ರಸಾದ್ ಅವರ ಭೇಟಿಯ ಕುರಿತಾಗಿ ಪ್ರತಿಕ್ರಿಯೆ ನೀಡಿ, ಲೋಕಸಭೆ ಚುನಾವಣೆ ಮುನ್ನ ಕೆಲವರನ್ನು ನೇಮಕ ಮಾಡಬೇಕು. ವರ್ಕಿಂಗ್ ಕಮಿಟಿ ಸದಸ್ಯರನ್ನು ನೇಮಕ ಮಾಡಲು ಆಗಿಲ್ಲ. ಅಭ್ಯರ್ಥಿಗಳ ವಿಚಾರದಲ್ಲಿ ಹಿರಿಯ ನಾಯಕರ ಅಭಿಪ್ರಾಯ ಪಡೆಯಯತ್ತಿದ್ದೇನೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಹಲವು ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್ಗೆ ಕರೆ ನೀಡಿವೆ. ರೈತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಖಾಸಗಿ ಸಾರಿಗೆ ಒಕ್ಕೂಟಗಳು, ಕಾರ್ಮಿಕ ಸಂಘಟನೆಗಳು ಸೇರಿ ನೂರಾರು ಸಂಘಟನೆಗಳು ಬೆಂಬಲ ನೀಡಿವೆ. ಇದರಿಂದ ಶುಕ್ರವಾರ ಕರ್ನಾಟಕ ಸಂಪೂರ್ಣ ಸ್ತಬ್ಧಗೊಳ್ಳುವ ಸಾಧ್ಯತೆ ಇದೆ. ಅಗತ್ಯ ಸೇವೆಗಳ ಜೊತೆ ಕೆಎಸ್ಆರ್ಟಿಸಿ, ಬಿಎಂಟಿಸಿ ಸಂಚಾರ ಇರುವ ನಿರೀಕ್ಷೆ ಇದೆ.
ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಫೇಸ್ಬುಕ್ನಲ್ಲಿ ಜೀವ ಬೆದರಿಕೆ…
ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…
ಮಡಿಕೇರಿ: ಮಾರ್ಚ್ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…
ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…
ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…