ಬೆಂಗಳೂರು : ಹೊಸ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಸದ್ಯಕ್ಕೆ ಅನುಮತಿ ನೀಡುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆಹಾರ ಸಚಿವರು, ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಲಿಂಕ್ ಅನ್ನು ನಾವೇ ಓಪನ್ ಮಾಡಿಲ್ಲ. ಅದಕ್ಕೆ ಕಾರಣ ಏನು ಅಂತಾ ಸದ್ಯದಲ್ಲೇ ಹೇಳುತ್ತೇನೆ. ಇನ್ನೂ ಒಂದಿಷ್ಟು ದಿನ ಎಪಿಎಲ್, ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ ಎಂದರು.
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ಗಳಿಗೆ ಬೇಡಿಕೆ ಹೆಚ್ಚಿದೆ. ಆದರೆ, ಹೊಸ ಕಾರ್ಡುಗಳಿಗೆ ಅನುಮತಿ ನೀಡದಿರುವ ಇಲಾಖೆಯ ನಿರ್ಧಾರ ಹಲವರಿಗೆ ನಿರಾಸೆ ತಂದಿದೆ.
ಅನ್ನಭಾಗ್ಯ ಯೋಜನೆಯ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣವನ್ನು ಈ ತಿಂಗಳು 25 ಅಥವಾ 26ರೊಳಗೆ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ. ಕಳೆದ ತಿಂಗಳು ಡಿಬಿಟಿ ವಿಚಾರವಾಗಿ ಹಣ ಹಾಕುವುದು ತಡವಾಯಿತು ಎಂದು ಮುನಿಯಪ್ಪ ಅವರು ಹೇಳಿದ್ದಾರೆ.
ಇನ್ನು ಆಹಾರ ಇಲಾಖೆಯಲ್ಲಿ 2,181 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…
ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ…
ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು…