ಬೆಂಗಳೂರು : ಹೊಸ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಸದ್ಯಕ್ಕೆ ಅನುಮತಿ ನೀಡುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆಹಾರ ಸಚಿವರು, ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಲಿಂಕ್ ಅನ್ನು ನಾವೇ ಓಪನ್ ಮಾಡಿಲ್ಲ. ಅದಕ್ಕೆ ಕಾರಣ ಏನು ಅಂತಾ ಸದ್ಯದಲ್ಲೇ ಹೇಳುತ್ತೇನೆ. ಇನ್ನೂ ಒಂದಿಷ್ಟು ದಿನ ಎಪಿಎಲ್, ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ ಎಂದರು.
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ಗಳಿಗೆ ಬೇಡಿಕೆ ಹೆಚ್ಚಿದೆ. ಆದರೆ, ಹೊಸ ಕಾರ್ಡುಗಳಿಗೆ ಅನುಮತಿ ನೀಡದಿರುವ ಇಲಾಖೆಯ ನಿರ್ಧಾರ ಹಲವರಿಗೆ ನಿರಾಸೆ ತಂದಿದೆ.
ಅನ್ನಭಾಗ್ಯ ಯೋಜನೆಯ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣವನ್ನು ಈ ತಿಂಗಳು 25 ಅಥವಾ 26ರೊಳಗೆ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ. ಕಳೆದ ತಿಂಗಳು ಡಿಬಿಟಿ ವಿಚಾರವಾಗಿ ಹಣ ಹಾಕುವುದು ತಡವಾಯಿತು ಎಂದು ಮುನಿಯಪ್ಪ ಅವರು ಹೇಳಿದ್ದಾರೆ.
ಇನ್ನು ಆಹಾರ ಇಲಾಖೆಯಲ್ಲಿ 2,181 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…