BREAKING NEWS

500 ರೂ ನೋಟುಗಳನ್ನು ಹಿಂಪಡೆಯುವ ಯೋಚನೆಯಿಲ್ಲ: ಆರ್ ಬಿಐ ಗವರ್ನರ್ ಸ್ಪಷ್ಟನೆ

ನವದೆಹಲಿ: 500 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಅಥವಾ 1000 ರೂಪಾಯಿ ನೋಟುಗಳನ್ನು ಮರು ಪರಿಚಯಿಸುವ ಯಾವುದೇ ಯೋಜನೆ ಭಾರತೀಯ ರಿಸರ್ವ್ ಬ್ಯಾಂಕ್ ಹೊಂದಿಲ್ಲ ಎಂದು ಗವರ್ನರ್ ಶಕ್ತಿಕಾಂತ ದಾಸ್ ಗುರುವಾರ ಹೇಳಿದ್ದಾರೆ.

“ಆರ್‌ಬಿಐ ರೂ.500 ನೋಟುಗಳನ್ನು ಹಿಂತೆಗೆದುಕೊಳ್ಳುವ ಅಥವಾ 1,000 ರೂ. ಮುಖಬೆಲೆಯ ನೋಟುಗಳನ್ನು ಮರು ಪರಿಚಯಿಸುವ ಬಗ್ಗೆ ಯೋಚಿಸುತ್ತಿಲ್ಲ ಸಾರ್ವಜನಿಕರು ಊಹಾಪೋಹ ಮಾಡಬಾರದು ಎಂದು ವಿನಂತಿಸುತ್ತಿದ್ದೇವೆ” ಎಂದು ಎಫ್‌ವೈ 24 ರ ಎರಡನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಅನಾವರಣಗೊಳಿಸಿದ ನಂತರ ದಾಸ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

2,000 ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಂಡ ಹಿನ್ನೆಲೆಯಲ್ಲಿ ಆರ್‌ಬಿಐ ಗವರ್ನರ್ ಈ ಸ್ಪಷ್ಟನೆ ನೀಡಿದ್ದಾರೆ. ಚಲಾವಣೆಯಲ್ಲಿದ್ದ ರೂ.2000 ನೋಟುಗಳಲ್ಲಿ ಶೇ.50ರಷ್ಟು ನೋಟುಗಳು ವಾಪಸ್ ಬಂದಿವೆ ಎಂದು ದಾಸ್ ಹೇಳಿದ್ದಾರೆ. ವಾಪಸ್ ಬಂದಿರುವ ನೋಟುಗಳ ಮೌಲ್ಯ 1.82 ಲಕ್ಷ ಕೋಟಿ ರೂ.ಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

“2,000 ರೂ.ಗಳ ಒಟ್ಟು ರೂ. 3.62 ಲಕ್ಷ ಕೋಟಿ ರೂ. ನೋಟುಗಳು ಚಲಾವಣೆಯಲ್ಲಿವೆ. ಘೋಷಣೆಯ ನಂತರ ಸುಮಾರು ರೂ. 1.8 ಲಕ್ಷ ಕೋಟಿ ರೂ. ರೂ. 2,000 ನೋಟುಗಳು ವಾಪಸ್ ಬಂದಿವೆ. ಇದು ಚಲಾವಣೆಯಲ್ಲಿದ್ದ 2,000 ನೋಟುಗಳ ಸರಿಸುಮಾರು ಶೇ. 50ರಷ್ಟು. .,” ಅವರು ವಿವರಿಸಿದರು.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

34 mins ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

3 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

5 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago