ನವದೆಹಲಿ: 500 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಅಥವಾ 1000 ರೂಪಾಯಿ ನೋಟುಗಳನ್ನು ಮರು ಪರಿಚಯಿಸುವ ಯಾವುದೇ ಯೋಜನೆ ಭಾರತೀಯ ರಿಸರ್ವ್ ಬ್ಯಾಂಕ್ ಹೊಂದಿಲ್ಲ ಎಂದು ಗವರ್ನರ್ ಶಕ್ತಿಕಾಂತ ದಾಸ್ ಗುರುವಾರ ಹೇಳಿದ್ದಾರೆ.
“ಆರ್ಬಿಐ ರೂ.500 ನೋಟುಗಳನ್ನು ಹಿಂತೆಗೆದುಕೊಳ್ಳುವ ಅಥವಾ 1,000 ರೂ. ಮುಖಬೆಲೆಯ ನೋಟುಗಳನ್ನು ಮರು ಪರಿಚಯಿಸುವ ಬಗ್ಗೆ ಯೋಚಿಸುತ್ತಿಲ್ಲ ಸಾರ್ವಜನಿಕರು ಊಹಾಪೋಹ ಮಾಡಬಾರದು ಎಂದು ವಿನಂತಿಸುತ್ತಿದ್ದೇವೆ” ಎಂದು ಎಫ್ವೈ 24 ರ ಎರಡನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಅನಾವರಣಗೊಳಿಸಿದ ನಂತರ ದಾಸ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
2,000 ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಂಡ ಹಿನ್ನೆಲೆಯಲ್ಲಿ ಆರ್ಬಿಐ ಗವರ್ನರ್ ಈ ಸ್ಪಷ್ಟನೆ ನೀಡಿದ್ದಾರೆ. ಚಲಾವಣೆಯಲ್ಲಿದ್ದ ರೂ.2000 ನೋಟುಗಳಲ್ಲಿ ಶೇ.50ರಷ್ಟು ನೋಟುಗಳು ವಾಪಸ್ ಬಂದಿವೆ ಎಂದು ದಾಸ್ ಹೇಳಿದ್ದಾರೆ. ವಾಪಸ್ ಬಂದಿರುವ ನೋಟುಗಳ ಮೌಲ್ಯ 1.82 ಲಕ್ಷ ಕೋಟಿ ರೂ.ಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
“2,000 ರೂ.ಗಳ ಒಟ್ಟು ರೂ. 3.62 ಲಕ್ಷ ಕೋಟಿ ರೂ. ನೋಟುಗಳು ಚಲಾವಣೆಯಲ್ಲಿವೆ. ಘೋಷಣೆಯ ನಂತರ ಸುಮಾರು ರೂ. 1.8 ಲಕ್ಷ ಕೋಟಿ ರೂ. ರೂ. 2,000 ನೋಟುಗಳು ವಾಪಸ್ ಬಂದಿವೆ. ಇದು ಚಲಾವಣೆಯಲ್ಲಿದ್ದ 2,000 ನೋಟುಗಳ ಸರಿಸುಮಾರು ಶೇ. 50ರಷ್ಟು. .,” ಅವರು ವಿವರಿಸಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…