ನವದೆಹಲಿ : ಭಾರತಕ್ಕೆ ಚೀತಾಗಳನ್ನು ತರಿಸಿದ ಸರ್ಕಾರದ ಕ್ರಮವನ್ನು ಪ್ರಶ್ನಿಸಲು ಯಾವುದೇ ಕಾರಣವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಒಂಬತ್ತು ಚೀತಾಗಳ ಸಾವಿನ ಹಿನ್ನೆಲೆಯಲ್ಲಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಹೀಗೆ ಹೇಳಿದೆ.
ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮೂರು ಮರಿಗಳು ಸೇರಿದಂತೆ ಒಂಬತ್ತು ಚೀತಾಗಳು ಮೃತಪಟ್ಟಿವೆ. ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ 20 ವಯಸ್ಕ ಚೀತಾಗಳನ್ನು ಪಾರ್ಕ್ಗೆ ತರಲಾಗಿತ್ತು. ನಂತರ ನಾಲ್ಕು ಮರಿಗಳು ಜನಿಸಿದ್ದವು. 1952ರಿಂದ ಅಳಿವಿನಂಚಿಗೆ ತಲುಪಿದ್ದ ಚೀತಾ ಸಂತತಿಯನ್ನು ದೇಶದಲ್ಲಿ ಮತ್ತೆ ಬೆಳೆಸುವ ಯತ್ನವಾಗಿ ಈ ಚೀತಾಗಳನ್ನು ತರಲಾಗಿತ್ತು.
ಚೀತಾಗಳನ್ನು ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಸೆಪ್ಟೆಂಬರ್ 2022ರಲ್ಲಿ ಮತ್ತು ಈ ವರ್ಷದ ಫೆಬ್ರವರಿಯಲ್ಲಿ ತರಲಾಗಿತ್ತು. ಇಲ್ಲಿನ ಹವಾಮಾನ ಮತ್ತು ಅದು ಚೀತಾಗಳ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಸತತ ನಿಗಾ ಇಡಲಾಗುತ್ತಿದೆ ಎಂದು ಸರ್ಕಾರ ಸುಪ್ರೀಂ ಕೋರ್ಟಿಗೆ ಹೇಳಿತ್ತು.
“ಬಹಳಷ್ಟು ತಯಾರಿ ನಡೆಸಲಾಗುತ್ತದೆ. ಪ್ರತಿ ವರ್ಷ 12-14 ಚೀತಾಗಳನ್ನು ತರಲಾಗುತ್ತದೆ., ಸಮಸ್ಯೆಗಳಿವೆ ಆದರೆ ಆತಂಕಕಾರಿಯಲ್ಲ,” ಎಂದು ಸರ್ಕಾರ ತಿಳಿಸಿತ್ತು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…