BREAKING NEWS

ಧರ್ಮಸ್ಥಳದ ಬಗ್ಗೆ ವದಂತಿ ಬೇಡ, ಸೌಜನ್ಯ ಪ್ರಕರಣದ ತನಿಖೆಯಾಗಲಿ: ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ : ಸೌಜನ್ಯ ಅತ್ಯಾಚಾರ ಹಾಗೂ ಸಾವು ಪ್ರಕರಣ ಸಮಗ್ರ ತನಿಖೆ ನಡೆಸುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆಯವರು ಒತ್ತಾಯಿಸಿದ್ದಾರೆ.

2011 ರಲ್ಲಿ ನಡೆದ ಪಾಂಗಳ ನಿವಾಸಿ ಕಾಲೇಜು ವಿದ್ಯಾರ್ಥಿನಿ ಕುಮಾರಿ ಸೌಜನ್ಯಳ ಹತ್ಯೆಯ ಪ್ರಕರಣದಲ್ಲಿ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಂಶ ಹೊರಬರುವಂತೆ ಸಿ.ಐ.ಡಿ. ನಂತರದಲ್ಲಿ ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಾದ ಸಿ.ಬಿ.ಐ. ಮೂಲಕ ತನಿಖೆ ನಡೆಸುವಂತೆ ಸರಕಾರವನ್ನು ಶ್ರೀಕ್ಷೇತ್ರದ ಪರವಾಗಿ ಮತ್ತು ನಮ್ಮ ಕುಟುಂಬಸ್ಥರ ಪರವಾಗಿ ಒತ್ತಾಯಿಸಲಾಗಿತ್ತು ಹಾಗೂ ಅದರಂತೆ ಸರ್ಕಾರ ಪ್ರಕರಣವನ್ನು ಸಿ.ಬಿ.ಐ. ತನಿಖೆ ನಡೆಸಲು ಆದೇಶಿಸಿರುತ್ತದೆ. ಅದರಂತೆ ತನಿಖೆ ನಡೆಸಿ ಸದರಿ ಇಲಾಖೆ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುತ್ತದೆ.

ನಂತರದಲ್ಲಿ ಮಾನ್ಯ ನ್ಯಾಯಾಲಯವು ವಿಚಾರಣೆ ನಡೆಸಿ ಆರೋಪಿತನನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಿದ್ದು ತಿಳಿದಿದೆ. ಆ ನಂತರದಲ್ಲಿ ಕೆಲವು ವ್ಯಕ್ತಿಗಳು ಶ್ರೀ ಕ್ಷೇತ್ರವನ್ನು ಹಾಗೂ ನಮ್ಮ ಕುಟುಂಬವನ್ನು ಗುರಿಯಾಗಿರಿಸಿಕೊಂಡು ಸುಳ್ಳು ಆರೋಪ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು ಇದರಿಂದ ಶ್ರೀಕ್ಷೇತ್ರದ ಭಕ್ತರಲ್ಲಿ ಹಾಗೂ ಕ್ಷೇತ್ರದೊಂದಿಗೆ ತೊಡಗಿಸಿಕೊಂಡಿರುವ ಅನೇಕರಿಗೆ ನೋವು ಉಂಟಾಗಿದ್ದು ಈ ಮೂಲಕ ಸಮಸ್ತ ಭಕ್ತಾದಿಗಳಲ್ಲಿ ಹಾಗೂ ಸಾರ್ವಜನಿಕರ ಗಮನಕ್ಕೆ ತರ ಬಯಸುವುದೆಂದರೆ ಈ ಪ್ರಕರಣದ ಬಗ್ಗೆ ಶ್ರೀ ಕ್ಷೇತ್ರದ ವತಿಯಿಂದ ಈಗಾಗಲೇ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಲಾಗಿತ್ತು ಹಾಗೂ ಅದರಂತೆ ಸರ್ಕಾರ ಸದರಿ ಪ್ರಕರಣವನ್ನು ಸಿ.ಬಿ.ಐ. ತನಿಖೆ ನಡೆಸಲು ಆದೇಶಿಸಿರುತ್ತದೆ.

ಆ ಪ್ರಕಾರ ಸರ್ಕಾರ ಅತ್ಯುನ್ನತ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿ ನ್ಯಾಯಾಲಯಕ್ಕೆ ಪ್ರಕರಣವನ್ನು ವಿಚಾರಣೆಗಾಗಿ ಒಳಪಡಿಸಿರುತ್ತದೆ. ಪ್ರಸ್ತುತ ಸದರಿ ವಿಚಾರವು ನ್ಯಾಯಾಲಯ, ಸರ್ಕಾರ ಮತ್ತು ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇರುವುದರಿಂದ ಕು. ಸೌಜನ್ಯಳ ಸಾವಿಗೆ ಸಂಬಂಧಿಸಿದಂತೆ ಮಾನ್ಯ ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡುವರೇ ಒತ್ತಾಯಿಸುತ್ತೇನೆ.

ಈ ಬಗ್ಗೆ ಕ್ರಮ ಕೈಗೊಳ್ಳುವರೇ ಸರ್ಕಾರವನ್ನು ಒತ್ತಾಯಿಸುತ್ತೇನೆ. ಹಾಗೂ ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳನ್ನು ಹಬ್ಬಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗೂ ಸಾರ್ವಜನಿಕರು ಗೊಂದಲಕ್ಕೀಡಾಗಬಾರದು ಎಂದು ವಿನಂತಿಸುತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

andolanait

Recent Posts

ತಾಪಮಾನ ಏರಿಕೆ ಬೆನ್ನಲ್ಲೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…

11 mins ago

ಓದುಗರ ಪತ್ರ: ವಿಶ್ವ ಶಾಂತಿಗೆ ಪೋಪ್ ಕರೆ ಸ್ವಾಗತಾರ್ಹ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…

57 mins ago

ಓದುಗರ ಪತ್ರ: ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಮೊತ್ತ ಹೆಚ್ಚಿಸಿ

ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…

60 mins ago

ಓದುಗರ ಪತ್ರ: ದಿಕ್ಕು ತಪ್ಪುತ್ತಿರುವ ಕೊಲ್ಲಿ ಸಮರ

ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…

1 hour ago

ಓದುಗರ ಪತ್ರ: ರಸ್ತೆ ದುರಸ್ತಿಗೊಳಿಸಿ

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…

4 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಕಸ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…

4 hours ago