BREAKING NEWS

ಧರ್ಮಸ್ಥಳದ ಬಗ್ಗೆ ವದಂತಿ ಬೇಡ, ಸೌಜನ್ಯ ಪ್ರಕರಣದ ತನಿಖೆಯಾಗಲಿ: ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ : ಸೌಜನ್ಯ ಅತ್ಯಾಚಾರ ಹಾಗೂ ಸಾವು ಪ್ರಕರಣ ಸಮಗ್ರ ತನಿಖೆ ನಡೆಸುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆಯವರು ಒತ್ತಾಯಿಸಿದ್ದಾರೆ.

2011 ರಲ್ಲಿ ನಡೆದ ಪಾಂಗಳ ನಿವಾಸಿ ಕಾಲೇಜು ವಿದ್ಯಾರ್ಥಿನಿ ಕುಮಾರಿ ಸೌಜನ್ಯಳ ಹತ್ಯೆಯ ಪ್ರಕರಣದಲ್ಲಿ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಂಶ ಹೊರಬರುವಂತೆ ಸಿ.ಐ.ಡಿ. ನಂತರದಲ್ಲಿ ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಾದ ಸಿ.ಬಿ.ಐ. ಮೂಲಕ ತನಿಖೆ ನಡೆಸುವಂತೆ ಸರಕಾರವನ್ನು ಶ್ರೀಕ್ಷೇತ್ರದ ಪರವಾಗಿ ಮತ್ತು ನಮ್ಮ ಕುಟುಂಬಸ್ಥರ ಪರವಾಗಿ ಒತ್ತಾಯಿಸಲಾಗಿತ್ತು ಹಾಗೂ ಅದರಂತೆ ಸರ್ಕಾರ ಪ್ರಕರಣವನ್ನು ಸಿ.ಬಿ.ಐ. ತನಿಖೆ ನಡೆಸಲು ಆದೇಶಿಸಿರುತ್ತದೆ. ಅದರಂತೆ ತನಿಖೆ ನಡೆಸಿ ಸದರಿ ಇಲಾಖೆ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುತ್ತದೆ.

ನಂತರದಲ್ಲಿ ಮಾನ್ಯ ನ್ಯಾಯಾಲಯವು ವಿಚಾರಣೆ ನಡೆಸಿ ಆರೋಪಿತನನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಿದ್ದು ತಿಳಿದಿದೆ. ಆ ನಂತರದಲ್ಲಿ ಕೆಲವು ವ್ಯಕ್ತಿಗಳು ಶ್ರೀ ಕ್ಷೇತ್ರವನ್ನು ಹಾಗೂ ನಮ್ಮ ಕುಟುಂಬವನ್ನು ಗುರಿಯಾಗಿರಿಸಿಕೊಂಡು ಸುಳ್ಳು ಆರೋಪ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು ಇದರಿಂದ ಶ್ರೀಕ್ಷೇತ್ರದ ಭಕ್ತರಲ್ಲಿ ಹಾಗೂ ಕ್ಷೇತ್ರದೊಂದಿಗೆ ತೊಡಗಿಸಿಕೊಂಡಿರುವ ಅನೇಕರಿಗೆ ನೋವು ಉಂಟಾಗಿದ್ದು ಈ ಮೂಲಕ ಸಮಸ್ತ ಭಕ್ತಾದಿಗಳಲ್ಲಿ ಹಾಗೂ ಸಾರ್ವಜನಿಕರ ಗಮನಕ್ಕೆ ತರ ಬಯಸುವುದೆಂದರೆ ಈ ಪ್ರಕರಣದ ಬಗ್ಗೆ ಶ್ರೀ ಕ್ಷೇತ್ರದ ವತಿಯಿಂದ ಈಗಾಗಲೇ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಲಾಗಿತ್ತು ಹಾಗೂ ಅದರಂತೆ ಸರ್ಕಾರ ಸದರಿ ಪ್ರಕರಣವನ್ನು ಸಿ.ಬಿ.ಐ. ತನಿಖೆ ನಡೆಸಲು ಆದೇಶಿಸಿರುತ್ತದೆ.

ಆ ಪ್ರಕಾರ ಸರ್ಕಾರ ಅತ್ಯುನ್ನತ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿ ನ್ಯಾಯಾಲಯಕ್ಕೆ ಪ್ರಕರಣವನ್ನು ವಿಚಾರಣೆಗಾಗಿ ಒಳಪಡಿಸಿರುತ್ತದೆ. ಪ್ರಸ್ತುತ ಸದರಿ ವಿಚಾರವು ನ್ಯಾಯಾಲಯ, ಸರ್ಕಾರ ಮತ್ತು ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇರುವುದರಿಂದ ಕು. ಸೌಜನ್ಯಳ ಸಾವಿಗೆ ಸಂಬಂಧಿಸಿದಂತೆ ಮಾನ್ಯ ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡುವರೇ ಒತ್ತಾಯಿಸುತ್ತೇನೆ.

ಈ ಬಗ್ಗೆ ಕ್ರಮ ಕೈಗೊಳ್ಳುವರೇ ಸರ್ಕಾರವನ್ನು ಒತ್ತಾಯಿಸುತ್ತೇನೆ. ಹಾಗೂ ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳನ್ನು ಹಬ್ಬಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗೂ ಸಾರ್ವಜನಿಕರು ಗೊಂದಲಕ್ಕೀಡಾಗಬಾರದು ಎಂದು ವಿನಂತಿಸುತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

2 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

2 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

2 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

2 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

2 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

2 hours ago