BREAKING NEWS

ಧರ್ಮಸ್ಥಳದ ಬಗ್ಗೆ ವದಂತಿ ಬೇಡ, ಸೌಜನ್ಯ ಪ್ರಕರಣದ ತನಿಖೆಯಾಗಲಿ: ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ : ಸೌಜನ್ಯ ಅತ್ಯಾಚಾರ ಹಾಗೂ ಸಾವು ಪ್ರಕರಣ ಸಮಗ್ರ ತನಿಖೆ ನಡೆಸುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆಯವರು ಒತ್ತಾಯಿಸಿದ್ದಾರೆ.

2011 ರಲ್ಲಿ ನಡೆದ ಪಾಂಗಳ ನಿವಾಸಿ ಕಾಲೇಜು ವಿದ್ಯಾರ್ಥಿನಿ ಕುಮಾರಿ ಸೌಜನ್ಯಳ ಹತ್ಯೆಯ ಪ್ರಕರಣದಲ್ಲಿ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಂಶ ಹೊರಬರುವಂತೆ ಸಿ.ಐ.ಡಿ. ನಂತರದಲ್ಲಿ ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಾದ ಸಿ.ಬಿ.ಐ. ಮೂಲಕ ತನಿಖೆ ನಡೆಸುವಂತೆ ಸರಕಾರವನ್ನು ಶ್ರೀಕ್ಷೇತ್ರದ ಪರವಾಗಿ ಮತ್ತು ನಮ್ಮ ಕುಟುಂಬಸ್ಥರ ಪರವಾಗಿ ಒತ್ತಾಯಿಸಲಾಗಿತ್ತು ಹಾಗೂ ಅದರಂತೆ ಸರ್ಕಾರ ಪ್ರಕರಣವನ್ನು ಸಿ.ಬಿ.ಐ. ತನಿಖೆ ನಡೆಸಲು ಆದೇಶಿಸಿರುತ್ತದೆ. ಅದರಂತೆ ತನಿಖೆ ನಡೆಸಿ ಸದರಿ ಇಲಾಖೆ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುತ್ತದೆ.

ನಂತರದಲ್ಲಿ ಮಾನ್ಯ ನ್ಯಾಯಾಲಯವು ವಿಚಾರಣೆ ನಡೆಸಿ ಆರೋಪಿತನನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಿದ್ದು ತಿಳಿದಿದೆ. ಆ ನಂತರದಲ್ಲಿ ಕೆಲವು ವ್ಯಕ್ತಿಗಳು ಶ್ರೀ ಕ್ಷೇತ್ರವನ್ನು ಹಾಗೂ ನಮ್ಮ ಕುಟುಂಬವನ್ನು ಗುರಿಯಾಗಿರಿಸಿಕೊಂಡು ಸುಳ್ಳು ಆರೋಪ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು ಇದರಿಂದ ಶ್ರೀಕ್ಷೇತ್ರದ ಭಕ್ತರಲ್ಲಿ ಹಾಗೂ ಕ್ಷೇತ್ರದೊಂದಿಗೆ ತೊಡಗಿಸಿಕೊಂಡಿರುವ ಅನೇಕರಿಗೆ ನೋವು ಉಂಟಾಗಿದ್ದು ಈ ಮೂಲಕ ಸಮಸ್ತ ಭಕ್ತಾದಿಗಳಲ್ಲಿ ಹಾಗೂ ಸಾರ್ವಜನಿಕರ ಗಮನಕ್ಕೆ ತರ ಬಯಸುವುದೆಂದರೆ ಈ ಪ್ರಕರಣದ ಬಗ್ಗೆ ಶ್ರೀ ಕ್ಷೇತ್ರದ ವತಿಯಿಂದ ಈಗಾಗಲೇ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಲಾಗಿತ್ತು ಹಾಗೂ ಅದರಂತೆ ಸರ್ಕಾರ ಸದರಿ ಪ್ರಕರಣವನ್ನು ಸಿ.ಬಿ.ಐ. ತನಿಖೆ ನಡೆಸಲು ಆದೇಶಿಸಿರುತ್ತದೆ.

ಆ ಪ್ರಕಾರ ಸರ್ಕಾರ ಅತ್ಯುನ್ನತ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿ ನ್ಯಾಯಾಲಯಕ್ಕೆ ಪ್ರಕರಣವನ್ನು ವಿಚಾರಣೆಗಾಗಿ ಒಳಪಡಿಸಿರುತ್ತದೆ. ಪ್ರಸ್ತುತ ಸದರಿ ವಿಚಾರವು ನ್ಯಾಯಾಲಯ, ಸರ್ಕಾರ ಮತ್ತು ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇರುವುದರಿಂದ ಕು. ಸೌಜನ್ಯಳ ಸಾವಿಗೆ ಸಂಬಂಧಿಸಿದಂತೆ ಮಾನ್ಯ ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡುವರೇ ಒತ್ತಾಯಿಸುತ್ತೇನೆ.

ಈ ಬಗ್ಗೆ ಕ್ರಮ ಕೈಗೊಳ್ಳುವರೇ ಸರ್ಕಾರವನ್ನು ಒತ್ತಾಯಿಸುತ್ತೇನೆ. ಹಾಗೂ ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳನ್ನು ಹಬ್ಬಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗೂ ಸಾರ್ವಜನಿಕರು ಗೊಂದಲಕ್ಕೀಡಾಗಬಾರದು ಎಂದು ವಿನಂತಿಸುತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

andolanait

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

2 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

3 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

4 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

5 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

10 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

12 hours ago