BREAKING NEWS

ವಯನಾಡ್ ಉಪಚುನಾವಣೆ ಘೋಷಣೆಗೆ ಆತುರವಿಲ್ಲ: ಚುನಾವಣಾ ಆಯೋಗ

ನವದೆಹಲಿ : ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿರುವ ರಾಹುಲ್ ಗಾಂಧಿ ಅವರಿಗೆ ಮಾನನಷ್ಟ ಮೊಕದ್ದಮೆಯಲ್ಲಿ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯವು ಒಂದು ತಿಂಗಳ ಕಾಲಾವಕಾಶ ನೀಡಿರುವ ಹಿನ್ನೆಲೆಯಲ್ಲಿ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಿಸಲು ಯಾವುದೇ ಆತುರವಿಲ್ಲ ಎಂದು ಚುನಾವಣಾ ಆಯೋಗ ಬುಧವಾರ ಹೇಳಿದೆ.
ಫೆಬ್ರುವರಿವರೆಗೆ ತೆರವಾಗಿರುವ ಸ್ಥಾನಗಳ ಆಧಾರದಲ್ಲಿ ಚುನಾವಣಾ ಆಯೋಗ ನಿರ್ಧಾರ ಕೈಗೊಂಡಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ವಯನಾಡ್ ಉಪಚುನಾವಣೆ ಘೋಷಣೆಗೆ ಯಾವುದೇ ಆತುರವಿಲ್ಲ. ವಿಚಾರಣಾ ನ್ಯಾಯಾಲಯದ ಮುಂದಿನ ಆದೇಶದ ವರೆಗೆ ನಾವು ಕಾಯುತ್ತೇವೆ ಎಂದು ತಿಳಿಸಿದ್ದಾರೆ.

ಗುಜರಾತ್ ನ್ಯಾಯಾಲಯ 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ನೀಡಿ ತೀರ್ಪು ನೀಡಿದೆ. ಶಿಕ್ಷೆಯನ್ನು 30 ದಿನಗಳವರೆಗೆ ಅಮಾನತಿನಲ್ಲಿ ಇರಿಸಿ, ಮೇಲ್ಮನವಿ ಸಲ್ಲಿಸುವುದಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದರ ಬೆನ್ನಲ್ಲೇ ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹಗೊಳಿಸಿ ಲೋಕಸಭಾ ಕಾರ್ಯಾಲಯ ಅಧಿಸೂಚನೆ ಹೊರಡಿಸಿತ್ತು.

ಕಾನೂನಿನ ಪ್ರಕಾರ, ಸ್ಥಾನ ತೆರವುಗೊಂಡ ಆರು ತಿಂಗಳೊಳಗೆ ಉಪಚುನಾವಣೆ ನಡೆಯಬೇಕಿದೆ. ಆದರೆ ಹಾಲಿ ಸಂಸದರ ಅವಧಿಯೂ ಒಂದು ವರ್ಷಕ್ಕೂ ಕಡಮೆಯಿದ್ದರೆ ಉಪಚುನಾವಣೆ ನಡೆಸುವಂತಿಲ್ಲ.

ವಯನಾಡ್ ಸಂಸದರ ಅವಧಿ ಇನ್ನೂ ಒಂದು ವರ್ಷಕ್ಕೂ ಹೆಚ್ಚಿದೆ. ಆದರೆ ನ್ಯಾಯಾಲಯದ ಮುಂದಿನ ಆದೇಶವನ್ನು ಗಮನದಲ್ಲಿಕೊಂಡು ಉಪಚುನಾವಣೆ ಘೋಷಣೆಗೆ ಯಾವುದೇ ಆತುರವಿಲ್ಲ ಎಂದು ರಾಜೀವ್ ಹೇಳಿದ್ದಾರೆ.

lokesh

Recent Posts

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

8 mins ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

40 mins ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

1 hour ago

ಭಾರತ್‌ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…

2 hours ago

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಮಂಡ್ಯ ರಮೇಶ್, ಸಾಧು ಕೋಕಿಲಾ ಕೇಸ್‌ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…

2 hours ago

ಯತೀಂದ್ರ ಸಿದ್ಧರಾಮಯ್ಯ ಅವಹೇಳನ ಪ್ರಕರಣ: ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲು

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ…

6 hours ago