BREAKING NEWS

ವಯನಾಡ್ ಉಪಚುನಾವಣೆ ಘೋಷಣೆಗೆ ಆತುರವಿಲ್ಲ: ಚುನಾವಣಾ ಆಯೋಗ

ನವದೆಹಲಿ : ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿರುವ ರಾಹುಲ್ ಗಾಂಧಿ ಅವರಿಗೆ ಮಾನನಷ್ಟ ಮೊಕದ್ದಮೆಯಲ್ಲಿ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯವು ಒಂದು ತಿಂಗಳ ಕಾಲಾವಕಾಶ ನೀಡಿರುವ ಹಿನ್ನೆಲೆಯಲ್ಲಿ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಿಸಲು ಯಾವುದೇ ಆತುರವಿಲ್ಲ ಎಂದು ಚುನಾವಣಾ ಆಯೋಗ ಬುಧವಾರ ಹೇಳಿದೆ.
ಫೆಬ್ರುವರಿವರೆಗೆ ತೆರವಾಗಿರುವ ಸ್ಥಾನಗಳ ಆಧಾರದಲ್ಲಿ ಚುನಾವಣಾ ಆಯೋಗ ನಿರ್ಧಾರ ಕೈಗೊಂಡಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ವಯನಾಡ್ ಉಪಚುನಾವಣೆ ಘೋಷಣೆಗೆ ಯಾವುದೇ ಆತುರವಿಲ್ಲ. ವಿಚಾರಣಾ ನ್ಯಾಯಾಲಯದ ಮುಂದಿನ ಆದೇಶದ ವರೆಗೆ ನಾವು ಕಾಯುತ್ತೇವೆ ಎಂದು ತಿಳಿಸಿದ್ದಾರೆ.

ಗುಜರಾತ್ ನ್ಯಾಯಾಲಯ 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ನೀಡಿ ತೀರ್ಪು ನೀಡಿದೆ. ಶಿಕ್ಷೆಯನ್ನು 30 ದಿನಗಳವರೆಗೆ ಅಮಾನತಿನಲ್ಲಿ ಇರಿಸಿ, ಮೇಲ್ಮನವಿ ಸಲ್ಲಿಸುವುದಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದರ ಬೆನ್ನಲ್ಲೇ ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹಗೊಳಿಸಿ ಲೋಕಸಭಾ ಕಾರ್ಯಾಲಯ ಅಧಿಸೂಚನೆ ಹೊರಡಿಸಿತ್ತು.

ಕಾನೂನಿನ ಪ್ರಕಾರ, ಸ್ಥಾನ ತೆರವುಗೊಂಡ ಆರು ತಿಂಗಳೊಳಗೆ ಉಪಚುನಾವಣೆ ನಡೆಯಬೇಕಿದೆ. ಆದರೆ ಹಾಲಿ ಸಂಸದರ ಅವಧಿಯೂ ಒಂದು ವರ್ಷಕ್ಕೂ ಕಡಮೆಯಿದ್ದರೆ ಉಪಚುನಾವಣೆ ನಡೆಸುವಂತಿಲ್ಲ.

ವಯನಾಡ್ ಸಂಸದರ ಅವಧಿ ಇನ್ನೂ ಒಂದು ವರ್ಷಕ್ಕೂ ಹೆಚ್ಚಿದೆ. ಆದರೆ ನ್ಯಾಯಾಲಯದ ಮುಂದಿನ ಆದೇಶವನ್ನು ಗಮನದಲ್ಲಿಕೊಂಡು ಉಪಚುನಾವಣೆ ಘೋಷಣೆಗೆ ಯಾವುದೇ ಆತುರವಿಲ್ಲ ಎಂದು ರಾಜೀವ್ ಹೇಳಿದ್ದಾರೆ.

lokesh

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

11 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

11 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

12 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

12 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

13 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

14 hours ago