BREAKING NEWS

ವಯನಾಡ್ ಉಪಚುನಾವಣೆ ಘೋಷಣೆಗೆ ಆತುರವಿಲ್ಲ: ಚುನಾವಣಾ ಆಯೋಗ

ನವದೆಹಲಿ : ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿರುವ ರಾಹುಲ್ ಗಾಂಧಿ ಅವರಿಗೆ ಮಾನನಷ್ಟ ಮೊಕದ್ದಮೆಯಲ್ಲಿ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯವು ಒಂದು ತಿಂಗಳ ಕಾಲಾವಕಾಶ ನೀಡಿರುವ ಹಿನ್ನೆಲೆಯಲ್ಲಿ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಿಸಲು ಯಾವುದೇ ಆತುರವಿಲ್ಲ ಎಂದು ಚುನಾವಣಾ ಆಯೋಗ ಬುಧವಾರ ಹೇಳಿದೆ.
ಫೆಬ್ರುವರಿವರೆಗೆ ತೆರವಾಗಿರುವ ಸ್ಥಾನಗಳ ಆಧಾರದಲ್ಲಿ ಚುನಾವಣಾ ಆಯೋಗ ನಿರ್ಧಾರ ಕೈಗೊಂಡಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ವಯನಾಡ್ ಉಪಚುನಾವಣೆ ಘೋಷಣೆಗೆ ಯಾವುದೇ ಆತುರವಿಲ್ಲ. ವಿಚಾರಣಾ ನ್ಯಾಯಾಲಯದ ಮುಂದಿನ ಆದೇಶದ ವರೆಗೆ ನಾವು ಕಾಯುತ್ತೇವೆ ಎಂದು ತಿಳಿಸಿದ್ದಾರೆ.

ಗುಜರಾತ್ ನ್ಯಾಯಾಲಯ 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ನೀಡಿ ತೀರ್ಪು ನೀಡಿದೆ. ಶಿಕ್ಷೆಯನ್ನು 30 ದಿನಗಳವರೆಗೆ ಅಮಾನತಿನಲ್ಲಿ ಇರಿಸಿ, ಮೇಲ್ಮನವಿ ಸಲ್ಲಿಸುವುದಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದರ ಬೆನ್ನಲ್ಲೇ ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹಗೊಳಿಸಿ ಲೋಕಸಭಾ ಕಾರ್ಯಾಲಯ ಅಧಿಸೂಚನೆ ಹೊರಡಿಸಿತ್ತು.

ಕಾನೂನಿನ ಪ್ರಕಾರ, ಸ್ಥಾನ ತೆರವುಗೊಂಡ ಆರು ತಿಂಗಳೊಳಗೆ ಉಪಚುನಾವಣೆ ನಡೆಯಬೇಕಿದೆ. ಆದರೆ ಹಾಲಿ ಸಂಸದರ ಅವಧಿಯೂ ಒಂದು ವರ್ಷಕ್ಕೂ ಕಡಮೆಯಿದ್ದರೆ ಉಪಚುನಾವಣೆ ನಡೆಸುವಂತಿಲ್ಲ.

ವಯನಾಡ್ ಸಂಸದರ ಅವಧಿ ಇನ್ನೂ ಒಂದು ವರ್ಷಕ್ಕೂ ಹೆಚ್ಚಿದೆ. ಆದರೆ ನ್ಯಾಯಾಲಯದ ಮುಂದಿನ ಆದೇಶವನ್ನು ಗಮನದಲ್ಲಿಕೊಂಡು ಉಪಚುನಾವಣೆ ಘೋಷಣೆಗೆ ಯಾವುದೇ ಆತುರವಿಲ್ಲ ಎಂದು ರಾಜೀವ್ ಹೇಳಿದ್ದಾರೆ.

lokesh

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

13 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

13 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

13 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

13 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

13 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

16 hours ago