ಲಂಡನ್ : ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸುಫ್ ಝಾಯಿ ಅವರು ಫೆಲೆಸ್ತೀನ್ನಲ್ಲಿ ಯುದ್ಧದಿಂದ ಮತ್ತು ದಾಳಿಗಳಿಂದ ತತ್ತರಿಸಿರುವ ಜನರಿಗೆ ಮಾನವೀಯ ಸಹಾಯವನ್ನು ಒದಗಿಸುತ್ತಿರುವ ಮೂರು ದತ್ತಿ ಸಂಸ್ಥೆಗಳಿಗೆ 2.5 ಕೋ. ರೂ. ದೇಣಿಗೆ ನೀಡಲು ನಿರ್ಧರಿಸಿದ್ದಾರೆ ಎಂದು ಘೋಷಿಸಿದ್ದಾರೆ.
X ವೀಡಿಯೊ ಸಂದೇಶದಲ್ಲಿ, ಯೂಸುಫ್ ಝಾಯಿ “ಗಾಝಾದ ಅಲ್-ಅಹ್ಲಿ ಆಸ್ಪತ್ರೆಯ ಮೇಲೆ ಬಾಂಬ್ ದಾಳಿಯನ್ನು ನೋಡಿ ನಾನು ಗಾಬರಿಗೊಂಡಿದ್ದೇನೆ. ಅದನ್ನು ನಾನು ಖಂಡಿಸುತ್ತೇನೆ” ಎಂದು ಹೇಳಿದ್ದಾರೆ.
“ನಾನು ಇಸ್ರೇಲ್, ಫೆಲಸ್ತೀನ್ ಮತ್ತು ಪ್ರಪಂಚದಾದ್ಯಂತ ಶಾಂತಿ ಬಯಸುತ್ತಿರುವವರೊಡನೆ ನನ್ನ ಧ್ವನಿಗೂಡಿಸುತ್ತಿದ್ದೇನೆ. ಸಾಮೂಹಿಕ ಶಿಕ್ಷೆಯು ಯಾವಾಗಲೂ ಉತ್ತರವಲ್ಲ. ಗಾಝಾದ ಅರ್ಧದಷ್ಟು ಜನಸಂಖ್ಯೆಯು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ಆ ಯುವ ಜನರಿಗೆ ತೊಂದರೆಯಾಗಬಾರದು. ಬಾಂಬ್ ದಾಳಿಯ ಮಧ್ಯೆ ಸರಿಯಾದ ಉದ್ಯೋಗವಿಲ್ಲದೇ ಅವರು ಜೀವನ ನಡೆಸಬಾರದು” ಎಂದಿದ್ದಾರೆ.
ಗಾಝಾಕ್ಕೆ ಮಾನವೀಯ ನೆರವು ನೀಡಲು ಅವಕಾಶ ನೀಡಬೇಕು ಮತ್ತು ಕದನ ವಿರಾಮಕ್ಕೆ ಕರೆ ನೀಡಬೇಕು ಎಂದು ಇಸ್ರೇಲಿ ಸರ್ಕಾರವನ್ನು ಮಲಾಲ ಒತ್ತಾಯಿಸಿದ್ದಾರೆ. ತಕ್ಷಣ ಕದನ ವಿರಾಮ ಘೋಷಿಸಿ, ಶಾಶ್ವತ ಶಾಂತಿಗಾಗಿ ಶ್ರಮಿಸಬೇಕು ಎಂದು ಸರ್ಕಾರಗಳಿಗೆ ಕರೆ ನೀಡಿದ್ದಾರೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…