BREAKING NEWS

ಫೆಲಸ್ತೀನಿಗೆ 2.5 ಕೋಟಿ ನೆರವು ಘೋಷಿಸಿದ ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮಲಾಲಾ

ಲಂಡನ್ : ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸುಫ್‌ ಝಾಯಿ ಅವರು ಫೆಲೆಸ್ತೀನ್‌ನಲ್ಲಿ ಯುದ್ಧದಿಂದ ಮತ್ತು ದಾಳಿಗಳಿಂದ ತತ್ತರಿಸಿರುವ ಜನರಿಗೆ ಮಾನವೀಯ ಸಹಾಯವನ್ನು ಒದಗಿಸುತ್ತಿರುವ ಮೂರು ದತ್ತಿ ಸಂಸ್ಥೆಗಳಿಗೆ 2.5 ಕೋ. ರೂ. ದೇಣಿಗೆ ನೀಡಲು ನಿರ್ಧರಿಸಿದ್ದಾರೆ ಎಂದು ಘೋಷಿಸಿದ್ದಾರೆ.

X ವೀಡಿಯೊ ಸಂದೇಶದಲ್ಲಿ, ಯೂಸುಫ್‌ ಝಾಯಿ “ಗಾಝಾದ ಅಲ್-ಅಹ್ಲಿ ಆಸ್ಪತ್ರೆಯ ಮೇಲೆ ಬಾಂಬ್ ದಾಳಿಯನ್ನು ನೋಡಿ ನಾನು ಗಾಬರಿಗೊಂಡಿದ್ದೇನೆ. ಅದನ್ನು ನಾನು ಖಂಡಿಸುತ್ತೇನೆ” ಎಂದು ಹೇಳಿದ್ದಾರೆ.

“ನಾನು ಇಸ್ರೇಲ್, ಫೆಲಸ್ತೀನ್ ಮತ್ತು ಪ್ರಪಂಚದಾದ್ಯಂತ ಶಾಂತಿ ಬಯಸುತ್ತಿರುವವರೊಡನೆ ನನ್ನ ಧ್ವನಿಗೂಡಿಸುತ್ತಿದ್ದೇನೆ. ಸಾಮೂಹಿಕ ಶಿಕ್ಷೆಯು ಯಾವಾಗಲೂ ಉತ್ತರವಲ್ಲ. ಗಾಝಾದ ಅರ್ಧದಷ್ಟು ಜನಸಂಖ್ಯೆಯು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ಆ ಯುವ ಜನರಿಗೆ ತೊಂದರೆಯಾಗಬಾರದು. ಬಾಂಬ್ ದಾಳಿಯ ಮಧ್ಯೆ ಸರಿಯಾದ ಉದ್ಯೋಗವಿಲ್ಲದೇ ಅವರು ಜೀವನ ನಡೆಸಬಾರದು” ಎಂದಿದ್ದಾರೆ.

ಗಾಝಾಕ್ಕೆ ಮಾನವೀಯ ನೆರವು ನೀಡಲು ಅವಕಾಶ ನೀಡಬೇಕು ಮತ್ತು ಕದನ ವಿರಾಮಕ್ಕೆ ಕರೆ ನೀಡಬೇಕು ಎಂದು ಇಸ್ರೇಲಿ ಸರ್ಕಾರವನ್ನು ಮಲಾಲ ಒತ್ತಾಯಿಸಿದ್ದಾರೆ. ತಕ್ಷಣ ಕದನ ವಿರಾಮ ಘೋಷಿಸಿ, ಶಾಶ್ವತ ಶಾಂತಿಗಾಗಿ ಶ್ರಮಿಸಬೇಕು ಎಂದು ಸರ್ಕಾರಗಳಿಗೆ ಕರೆ ನೀಡಿದ್ದಾರೆ.

https://x.com/Malala/status/1714398922255347933?s=20

andolanait

Recent Posts

ಎಚ್.ಸಿ.ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ: ಸಚಿವ ಕೆ.ವೆಂಕಟೇಶ್‌

ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್‌ ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ದಲಿತ ಸಿಎಂ ಕೂಗು…

56 mins ago

ವಿಜಯೇಂದ್ರ ಸಿಎಂ ಆದರೆ ರಾಜ್ಯ ಸುಭಿಕ್ಷವಾಗಿ ಇರಲಿದೆ: ವಿಜಯೇಂದ್ರ ಅಭಿಮಾನಿ ಬಳಗದ ಶಶಿಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…

1 hour ago

ಒಳ ಮೀಸಲಾತಿಯಲ್ಲಿರುವ ಗೊಂದಲ ನಿವಾರಣೆ ಮಾಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್‍ಗೆ…

2 hours ago

ಏಪ್ರಿಲ್‌ ಹಾಗೂ ಮೇ ತಿಂಗಳಿನಲ್ಲಿ ವಿಪರೀತ ಬಿಸಿಲಿನ ತೀವ್ರತೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…

2 hours ago

ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ: ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಿಷ್ಟು.!

ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ಫೋನ್‌ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ…

3 hours ago

ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದಾರೆ: ಸಚಿವ ಪರಮೇಶ್ವರ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್‌…

4 hours ago