ಲಂಡನ್ : ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸುಫ್ ಝಾಯಿ ಅವರು ಫೆಲೆಸ್ತೀನ್ನಲ್ಲಿ ಯುದ್ಧದಿಂದ ಮತ್ತು ದಾಳಿಗಳಿಂದ ತತ್ತರಿಸಿರುವ ಜನರಿಗೆ ಮಾನವೀಯ ಸಹಾಯವನ್ನು ಒದಗಿಸುತ್ತಿರುವ ಮೂರು ದತ್ತಿ ಸಂಸ್ಥೆಗಳಿಗೆ 2.5 ಕೋ. ರೂ. ದೇಣಿಗೆ ನೀಡಲು ನಿರ್ಧರಿಸಿದ್ದಾರೆ ಎಂದು ಘೋಷಿಸಿದ್ದಾರೆ.
X ವೀಡಿಯೊ ಸಂದೇಶದಲ್ಲಿ, ಯೂಸುಫ್ ಝಾಯಿ “ಗಾಝಾದ ಅಲ್-ಅಹ್ಲಿ ಆಸ್ಪತ್ರೆಯ ಮೇಲೆ ಬಾಂಬ್ ದಾಳಿಯನ್ನು ನೋಡಿ ನಾನು ಗಾಬರಿಗೊಂಡಿದ್ದೇನೆ. ಅದನ್ನು ನಾನು ಖಂಡಿಸುತ್ತೇನೆ” ಎಂದು ಹೇಳಿದ್ದಾರೆ.
“ನಾನು ಇಸ್ರೇಲ್, ಫೆಲಸ್ತೀನ್ ಮತ್ತು ಪ್ರಪಂಚದಾದ್ಯಂತ ಶಾಂತಿ ಬಯಸುತ್ತಿರುವವರೊಡನೆ ನನ್ನ ಧ್ವನಿಗೂಡಿಸುತ್ತಿದ್ದೇನೆ. ಸಾಮೂಹಿಕ ಶಿಕ್ಷೆಯು ಯಾವಾಗಲೂ ಉತ್ತರವಲ್ಲ. ಗಾಝಾದ ಅರ್ಧದಷ್ಟು ಜನಸಂಖ್ಯೆಯು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ಆ ಯುವ ಜನರಿಗೆ ತೊಂದರೆಯಾಗಬಾರದು. ಬಾಂಬ್ ದಾಳಿಯ ಮಧ್ಯೆ ಸರಿಯಾದ ಉದ್ಯೋಗವಿಲ್ಲದೇ ಅವರು ಜೀವನ ನಡೆಸಬಾರದು” ಎಂದಿದ್ದಾರೆ.
ಗಾಝಾಕ್ಕೆ ಮಾನವೀಯ ನೆರವು ನೀಡಲು ಅವಕಾಶ ನೀಡಬೇಕು ಮತ್ತು ಕದನ ವಿರಾಮಕ್ಕೆ ಕರೆ ನೀಡಬೇಕು ಎಂದು ಇಸ್ರೇಲಿ ಸರ್ಕಾರವನ್ನು ಮಲಾಲ ಒತ್ತಾಯಿಸಿದ್ದಾರೆ. ತಕ್ಷಣ ಕದನ ವಿರಾಮ ಘೋಷಿಸಿ, ಶಾಶ್ವತ ಶಾಂತಿಗಾಗಿ ಶ್ರಮಿಸಬೇಕು ಎಂದು ಸರ್ಕಾರಗಳಿಗೆ ಕರೆ ನೀಡಿದ್ದಾರೆ.
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…
ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…