BREAKING NEWS

ನಾರ್ವೆ ಲೇಖಕ ಜಾನ್ ಫಾಸ್ಸೆಗೆ ಸಾಹಿತ್ಯದ ನೊಬೆಲ್ ಪ್ರಶಸ್ತಿ

ಸ್ಟಾಕ್‌ಹೋಮ್: ನಾಟಕಕಾರ, ಕಾದಂಬರಿಕಾರ ಹಾಗೂ ನಾರ್ಡಿಕ್ ಬರವಣಿಗೆಯ ಮಾಸ್ಟರ್ ಜಾನ್ ಫಾಸ್ಸೆ ಅವರಿಗೆ 2023ನೇ ಸಾಲಿನ ಸಾಹಿತ್ಯ ಕ್ಷೇತ್ರದ ನೊಬೆಲ್ ಪ್ರಶಸ್ತಿ ಲಭಿಸಿದೆ.

ಜಾನ್ ಫಾಸ್ಸೆ ಅವರ ಕಾದಂಬರಿಗಳು ಧ್ವನಿ ಇಲ್ಲದವರಿಗೆ ದನಿಯಾಗಿವೆ ಎಂದು ನೊಬೆಲ್ ಪ್ರಶಸ್ತಿ ಅಕಾಡೆಮಿ ಬಣ್ಣಿಸಿದೆ.

ಫಾಸ್ಸೆ ಅವರ ಕೆಲಸವು “ಅವರ ನಾರ್ವೇಜಿಯನ್ ಹಿನ್ನೆಲೆಯ ಭಾಷೆ ಮತ್ತು ಸ್ವಭಾವದಲ್ಲಿ” ಬೇರೂರಿದೆ ಎಂದು ನೊಬೆಲ್ ಸಾಹಿತ್ಯ ಸಮಿತಿಯ ಅಧ್ಯಕ್ಷ ಆಂಡರ್ಸ್ ಓಲ್ಸನ್ ಅವರು ಹೇಳಿದ್ದಾರೆ.

ಫಾಸ್ಸೆ ಅವರ ಹಲವಾರು ನಾಟಕಗಳು, ಕಾದಂಬರಿಗಳು, ಕವನ ಸಂಕಲನಗಳು, ಪ್ರಬಂಧಗಳು, ಮಕ್ಕಳ ಪುಸ್ತಕಗಳು ಮತ್ತು ಭಾಷಾಂತರಗಳನ್ನು ಒಳಗೊಂಡ ಹಲವು ಕೃತಿಗಳನ್ನು ಗೌರವಿಸಿ ಈ ನೊಬೆಲ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

64 ವರ್ಷದ ಜಾನ್ ಫಾಸ್ಸೆ ಅವರು ಎರಡು ಡಜನ್‌ಗಿಂತಲೂ ಹೆಚ್ಚು ನಾಟಕಗಳನ್ನು ಬರೆದಿದ್ದು, ನಾಲ್ಕು ದಶಕಗಳ ಕಾಲ ಕಾದಂಬರಿಗಳು, ಪ್ರಬಂಧಗಳು, ಕವನ ಸಂಕಲನಗಳು ಮತ್ತು ಮಕ್ಕಳ ಪುಸ್ತಕಗಳನ್ನು ಕೂಡ  ಪ್ರಕಟಿಸಿದ್ದಾರೆ. ಇವರ ಲೇಖನ, ಬರಹಗಳು 40 ಭಾಷೆಗಳಲ್ಲೂ ಭಾಷಾಂತರಗೊಂಡಿವೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

13 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

13 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

13 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

13 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

13 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

13 hours ago