BREAKING NEWS

ಪದ್ಮನಾಭನಗರದಲ್ಲಿ ಇಬ್ಬರು ಕೈ ಅಭ್ಯರ್ಥಿಗಳಿಂದ ನಾಮಿನೇಷನ್ : ಸಚಿವ ಆರ್.ಅಶೋಕ್ ವಿರುದ್ಧ ಸಂಸದ ಡಿ.ಕೆ.ಸುರೇಶ್ ಕಣಕ್ಕೆ

ಬೆಂಗಳೂರು : ವಿಧಾನಸಭಾ ಚುನಾವಣೆಗೆ ಕೇವಲ 20 ದಿನಗಳು ಮಾತ್ರ ಬಾಕಿಯಿದ್ದು, ಪದ್ಮನಾಭನಗರದ ಕಾಂಗ್ರೆಸ್ ಅಭ್ಯರ್ಥಿಯನ್ನು ಕೊನೇ ಕ್ಷಣದಲ್ಲಿ ಬದಲಾವಣೆ ಮಾಡಲಾಗಿದೆ.

ಡಿ.ಕೆ.ಶಿವಕುಮಾರ್ ಅವರಿಗೆ ಪ್ರಬಲ ಸ್ಪರ್ಧೆಯೊಡ್ಡುವ ನಿಟ್ಟಿನಲ್ಲಿ ಕನಕಪುರ ಕ್ಷೇತ್ರದಿಂದ ಬಿಜೆಪಿ ಸಚಿವ ಆರ್.ಅಶೋಕ್ ಅವರನ್ನು ಕಣಕ್ಕಿಳಿಸಿದೆ. ಅಲ್ಲದೇ ಪದ್ಮನಾಭನಗರದಿಂದಲೂ ಆರ್.ಅಶೋಕ್ ಗೆ ಟಿಕೆಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಇದೀಗ ಆರ್.ಅಶೋಕ್ ಸ್ವಕ್ಷೇತ್ರವಾದ ಪದ್ಮನಾಭನಗರದಲ್ಲಿಯೇ ಅವರನ್ನು ಕಟ್ಟಿ ಹಾಕಲು ಕಾಂಗ್ರೆಸ್ ಹೊಸ ತಂತ್ರ ರೂಪಿಸಿದ್ದು, ಪದ್ಮನಾಭನಗರದ ಅಭ್ಯರ್ಥಿಯನ್ನು ಬದಲಿಸಿದೆ. ಆರ್.ಅಶೋಕ್ ವಿರುದ್ಧ ಡಿ.ಕೆ.ಸುರೇಶ್ ಅವರನ್ನು ಕಣಕ್ಕಿಳಿಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪದ್ಮನಾಭನಗರದಿಂದ ಡಿ.ಕೆ.ಸುರೇಶ್ ಕಣಕ್ಕಿಳಿಯಲಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಸುರೇಶ್ ಇಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ.

ನಮ್ಮ ಅಭ್ಯರ್ಥಿ ರಘುನಾಥ್ ನಾಯ್ಡು ಗೆಲ್ಲುವ ವಾತಾವರಣ ಇದೆ. ರಘುನಾಥ್ ನಾಯ್ಡು ಅವರೂ ನಾಮಪತ್ರ ಸಲ್ಲಿಸುತ್ತಾರೆ. ಅದರ ಜೊತೆಗೆ ಡಿ.ಕೆ.ಸುರೇಶ್ ಕೂಡ ನಾಮಪತ್ರ ಸಲ್ಲಿಸುತ್ತಾರೆ ಎಂದರು.

ಈ ಮೂಲಕ ಪದ್ಮನಾಭನಗರ ಕ್ಷೇತ್ರ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿದೆ.

lokesh

Recent Posts

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

45 mins ago

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

4 hours ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

4 hours ago

ಓದುಗರ ಪತ್ರ: ವಿದ್ಯುತ್ ವಿತರಣೆ ಖಾಸಗೀಕರಣ ಸಲ್ಲದು

ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…

4 hours ago

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

7 hours ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

7 hours ago