ಬೆಂಗಳೂರು : ವಿಧಾನ ಪರಿಷತ್ ಗೆ ಮೂವರು ಸದಸ್ಯರ ನಾಮ ನಿರ್ದೇಶನ ಮಾಡುವಂತೆ ರಾಜ್ಯ ಸರಕಾರ ಸಲ್ಲಿಸಿದ್ದ ಪ್ರಸ್ತಾವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಿದ್ದಾರೆ.
ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಟಿ ಉಮಾಶ್ರೀ, ಮಾಜಿ ಸಚಿವ ಎಂ.ಆರ್.ಸೀತಾರಾಮ್ ಹಾಗೂ ನಿವೃತ್ತ ಈಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನೂ ಅಂತಿಮಗೊಳಿಸಿ ಪಟ್ಟಿಯನ್ನು ಕಳುಹಿಸಿದ್ದರು.
ಕಲಾವಿದರ ಕೋಟಾದಡಿ ಉಮಾಶ್ರೀ ಅವರಿಗೆ ಸ್ಥಾನ ನೀಡಿದರೆ, ಶಿಕ್ಷಣ ಕ್ಷೇತ್ರದ ಕೋಟಾದಡಿ ಎಂ.ಆರ್.ಸೀತಾರಾಮ್ ಹಾಗೂ ಸಮಾಜ ಸೇವೆ ಹೆಸರಲ್ಲಿ ಸುಧಾಮ್ ದಾಸ್ ಅವರಿಗೆ ನಾಮನಿರ್ದೇಶನ ಮಾಡುವಂತೆ ಕೋರಿ ಶಿಫಾರಸ್ಸು ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಮಧ್ಯೆ ಸುಧಾಮ್ ದಾಸ್ ಅವರನ್ನ ಪರಿಷತ್ ಗೆ ನಾಮ ನಿರ್ದೇಶನಕ್ಕೆ ವಿರೋಧಿಸಿ ಸಚಿವರಾದ ಕೆ.ಎಚ್ ಮುನಿಯಪ್ಪ, ಡಾ.ಜಿ.ಪರಮೇಶ್ವರ್, ಆರ್.ಬಿ ತಿಮ್ಮಾಪುರ್, ಹೆಚ್.ಸಿ ಮಹದೇವಪ್ಪ ಅವರು ಹೈಕಮಾಂಡ್ ಗೆ ಪತ್ರ ಬರೆದಿದ್ದರು. ಆದರೆ ಇದೀಗ ಸುಧಾಮ್ ದಾಸ್ ಅವರ ನಾಮ ನಿರ್ದೇಶನಕ್ಕೆ ರಾಜ್ಯಪಾಲರಿಂದ ಅನುಮೋದನೆ ಸಿಕ್ಕಿದೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…