ಬೆಂಗಳೂರು : ವಿಧಾನ ಪರಿಷತ್ ಗೆ ಮೂವರು ಸದಸ್ಯರ ನಾಮ ನಿರ್ದೇಶನ ಮಾಡುವಂತೆ ರಾಜ್ಯ ಸರಕಾರ ಸಲ್ಲಿಸಿದ್ದ ಪ್ರಸ್ತಾವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಿದ್ದಾರೆ.
ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಟಿ ಉಮಾಶ್ರೀ, ಮಾಜಿ ಸಚಿವ ಎಂ.ಆರ್.ಸೀತಾರಾಮ್ ಹಾಗೂ ನಿವೃತ್ತ ಈಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನೂ ಅಂತಿಮಗೊಳಿಸಿ ಪಟ್ಟಿಯನ್ನು ಕಳುಹಿಸಿದ್ದರು.
ಕಲಾವಿದರ ಕೋಟಾದಡಿ ಉಮಾಶ್ರೀ ಅವರಿಗೆ ಸ್ಥಾನ ನೀಡಿದರೆ, ಶಿಕ್ಷಣ ಕ್ಷೇತ್ರದ ಕೋಟಾದಡಿ ಎಂ.ಆರ್.ಸೀತಾರಾಮ್ ಹಾಗೂ ಸಮಾಜ ಸೇವೆ ಹೆಸರಲ್ಲಿ ಸುಧಾಮ್ ದಾಸ್ ಅವರಿಗೆ ನಾಮನಿರ್ದೇಶನ ಮಾಡುವಂತೆ ಕೋರಿ ಶಿಫಾರಸ್ಸು ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಮಧ್ಯೆ ಸುಧಾಮ್ ದಾಸ್ ಅವರನ್ನ ಪರಿಷತ್ ಗೆ ನಾಮ ನಿರ್ದೇಶನಕ್ಕೆ ವಿರೋಧಿಸಿ ಸಚಿವರಾದ ಕೆ.ಎಚ್ ಮುನಿಯಪ್ಪ, ಡಾ.ಜಿ.ಪರಮೇಶ್ವರ್, ಆರ್.ಬಿ ತಿಮ್ಮಾಪುರ್, ಹೆಚ್.ಸಿ ಮಹದೇವಪ್ಪ ಅವರು ಹೈಕಮಾಂಡ್ ಗೆ ಪತ್ರ ಬರೆದಿದ್ದರು. ಆದರೆ ಇದೀಗ ಸುಧಾಮ್ ದಾಸ್ ಅವರ ನಾಮ ನಿರ್ದೇಶನಕ್ಕೆ ರಾಜ್ಯಪಾಲರಿಂದ ಅನುಮೋದನೆ ಸಿಕ್ಕಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…