ಬೆಂಗಳೂರು : ವಿಧಾನ ಪರಿಷತ್ ಗೆ ಮೂವರು ಸದಸ್ಯರ ನಾಮ ನಿರ್ದೇಶನ ಮಾಡುವಂತೆ ರಾಜ್ಯ ಸರಕಾರ ಸಲ್ಲಿಸಿದ್ದ ಪ್ರಸ್ತಾವಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಿದ್ದಾರೆ.
ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಟಿ ಉಮಾಶ್ರೀ, ಮಾಜಿ ಸಚಿವ ಎಂ.ಆರ್.ಸೀತಾರಾಮ್ ಹಾಗೂ ನಿವೃತ್ತ ಈಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನೂ ಅಂತಿಮಗೊಳಿಸಿ ಪಟ್ಟಿಯನ್ನು ಕಳುಹಿಸಿದ್ದರು.
ಕಲಾವಿದರ ಕೋಟಾದಡಿ ಉಮಾಶ್ರೀ ಅವರಿಗೆ ಸ್ಥಾನ ನೀಡಿದರೆ, ಶಿಕ್ಷಣ ಕ್ಷೇತ್ರದ ಕೋಟಾದಡಿ ಎಂ.ಆರ್.ಸೀತಾರಾಮ್ ಹಾಗೂ ಸಮಾಜ ಸೇವೆ ಹೆಸರಲ್ಲಿ ಸುಧಾಮ್ ದಾಸ್ ಅವರಿಗೆ ನಾಮನಿರ್ದೇಶನ ಮಾಡುವಂತೆ ಕೋರಿ ಶಿಫಾರಸ್ಸು ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಮಧ್ಯೆ ಸುಧಾಮ್ ದಾಸ್ ಅವರನ್ನ ಪರಿಷತ್ ಗೆ ನಾಮ ನಿರ್ದೇಶನಕ್ಕೆ ವಿರೋಧಿಸಿ ಸಚಿವರಾದ ಕೆ.ಎಚ್ ಮುನಿಯಪ್ಪ, ಡಾ.ಜಿ.ಪರಮೇಶ್ವರ್, ಆರ್.ಬಿ ತಿಮ್ಮಾಪುರ್, ಹೆಚ್.ಸಿ ಮಹದೇವಪ್ಪ ಅವರು ಹೈಕಮಾಂಡ್ ಗೆ ಪತ್ರ ಬರೆದಿದ್ದರು. ಆದರೆ ಇದೀಗ ಸುಧಾಮ್ ದಾಸ್ ಅವರ ನಾಮ ನಿರ್ದೇಶನಕ್ಕೆ ರಾಜ್ಯಪಾಲರಿಂದ ಅನುಮೋದನೆ ಸಿಕ್ಕಿದೆ.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…