BREAKING NEWS

ಇಂದು ಬಿಎಂಟಿಸಿ ತೆಕ್ಕೆಗೆ ನಾನ್ ಎಸಿ ಎಲೆಕ್ಟ್ರಿಕ್ ಬಸ್!

ಬೆಂಗಳೂರು: ಟಾಟಾ ಮೋಟಾರ್ಸ್‌ನ ಅಂಗಸಂಸ್ಥೆಯಾದ ಟಿಎಂಎಲ್ ಸ್ಮಾರ್ಟ್ ಸಿಟಿ ಮೊಬಿಲಿಟಿ ಸೊಲ್ಯೂಷನ್ಸ್‌ನಿಂದ ಮೊದಲ ನಾನ್-ಎಸಿ ಎಲೆಕ್ಟ್ರಿಕ್ ಬಸ್ ಶುಕ್ರವಾರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಕೈ ಸೇರಲಿದೆ.

FAME II ಯೋಜನೆಯ ಅಡಿಯಲ್ಲಿ 921 ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸುವ ಒಪ್ಪಂದಕ್ಕೆ ಸಹಿ ಹಾಕಲಾಗಿದ್ದು, ಸಂಸ್ಥೆಯು ಇಂದು ಮೊದಲ ಬಸ್’ನ್ನು ಬಿಎಂಟಿಸಿಗೆ ನೀಡಲಿದೆ.

ಶಕ್ತಿ ಯೋಜನೆ ಪ್ರಾರಂಭವಾದ ನಂತರ, ರಾಜ್ಯದಲ್ಲಿ ಸಾರಿಗೆ ಬಸ್ ಗಳಲ್ಲಿ ಸಂಚರಿಸುವ ಜನರ ಸಂಖ್ಯೆ ಹೆಚ್ಚಳವಾಗಿದೆ. ಪ್ರತೀನಿತ್ಯ ಸುಮಾರು 40 ಲಕ್ಷ ಜನರು ಬಿಎಂಟಿಸಿ ಬಸ್ ಗಳಲ್ಲಿ ಸಂಚರಿಸುತ್ತಿದ್ದಾರೆ.

ಒಪ್ಪಂದದಂತೆ TML ಸ್ಮಾರ್ಟ್ ಸಿಟಿ ಮೊಬಿಲಿಟಿ ಸೊಲ್ಯೂಷನ್ಸ್ 921 ಬಸ್‌ಗಳನ್ನು ಬಿಎಂಟಿಸಿಗೆ ನೀಡಲಿದ್ದು, 12 ವರ್ಷಗಳವರೆಗೆ ಬಸ್ ಗಳನ್ನು ಪೂರೈಸಿ, ಅವುಗಳ ನಿರ್ವಹಣೆ ಮಾಡಲಿದೆ.

ಈ ಬಸ್​​ಗಳು ಲೋ ಫ್ಲೋರ್ ಬಸ್​ಗಳಾಗಿದ್ದು, ಗ್ರಾಸ್ ಕಾಸ್ಟ್ ಕಾಂಟ್ರಾಕ್ಟ್ (ಜಿಸಿಸಿ) ಮಾದರಿಯಲ್ಲಿ ಕಾರ್ಯನಿರ್ವಹಿಸಲಿವೆ ಎಂದು ಬಿಎಂಟಿಸಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮೊದಲ ಬಸ್ ಅನ್ನು ಪ್ರಾಯೋಗಿಕ ಚಾಲನೆ ಮಾಡಲಾಗುತ್ತದೆ. ನಂತರ ಸೇವೆಗೆ ಮತ್ತಷ್ಟು ಬಸ್ ಗಳನ್ನು ನೀಡಲಾಗುತ್ತದೆ. ಹಂತ ಹಂತವಾಗಿ ಎಲ್ಲಾ 921 ಬಸ್‌ಗಳನ್ನು ಹಸ್ತಾಂತರಿಸಲಾಗುತ್ತದೆ. ಪ್ರಸ್ತುತ, ನಿಗಮವು ಸ್ವಿಚ್ ಮೊಬಿಲಿಟಿ ಲಿಮಿಟೆಡ್‌ನಿಂದ ನೇರಳೆ ಮತ್ತು ಜೆಬಿಎಂ ಆಟೋದ ಹಸಿರು ಬಣ್ಣದ ಎರಡು ಮಾದರಿಯ ಎಲೆಕ್ಟ್ರಿಕ್ ಬಸ್‌ಗಳನ್ನು ನಿರ್ವಹಿಸುತ್ತಿದೆ.

andolanait

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

3 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago