BREAKING NEWS

ಇಂದು ಬಿಎಂಟಿಸಿ ತೆಕ್ಕೆಗೆ ನಾನ್ ಎಸಿ ಎಲೆಕ್ಟ್ರಿಕ್ ಬಸ್!

ಬೆಂಗಳೂರು: ಟಾಟಾ ಮೋಟಾರ್ಸ್‌ನ ಅಂಗಸಂಸ್ಥೆಯಾದ ಟಿಎಂಎಲ್ ಸ್ಮಾರ್ಟ್ ಸಿಟಿ ಮೊಬಿಲಿಟಿ ಸೊಲ್ಯೂಷನ್ಸ್‌ನಿಂದ ಮೊದಲ ನಾನ್-ಎಸಿ ಎಲೆಕ್ಟ್ರಿಕ್ ಬಸ್ ಶುಕ್ರವಾರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಕೈ ಸೇರಲಿದೆ.

FAME II ಯೋಜನೆಯ ಅಡಿಯಲ್ಲಿ 921 ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸುವ ಒಪ್ಪಂದಕ್ಕೆ ಸಹಿ ಹಾಕಲಾಗಿದ್ದು, ಸಂಸ್ಥೆಯು ಇಂದು ಮೊದಲ ಬಸ್’ನ್ನು ಬಿಎಂಟಿಸಿಗೆ ನೀಡಲಿದೆ.

ಶಕ್ತಿ ಯೋಜನೆ ಪ್ರಾರಂಭವಾದ ನಂತರ, ರಾಜ್ಯದಲ್ಲಿ ಸಾರಿಗೆ ಬಸ್ ಗಳಲ್ಲಿ ಸಂಚರಿಸುವ ಜನರ ಸಂಖ್ಯೆ ಹೆಚ್ಚಳವಾಗಿದೆ. ಪ್ರತೀನಿತ್ಯ ಸುಮಾರು 40 ಲಕ್ಷ ಜನರು ಬಿಎಂಟಿಸಿ ಬಸ್ ಗಳಲ್ಲಿ ಸಂಚರಿಸುತ್ತಿದ್ದಾರೆ.

ಒಪ್ಪಂದದಂತೆ TML ಸ್ಮಾರ್ಟ್ ಸಿಟಿ ಮೊಬಿಲಿಟಿ ಸೊಲ್ಯೂಷನ್ಸ್ 921 ಬಸ್‌ಗಳನ್ನು ಬಿಎಂಟಿಸಿಗೆ ನೀಡಲಿದ್ದು, 12 ವರ್ಷಗಳವರೆಗೆ ಬಸ್ ಗಳನ್ನು ಪೂರೈಸಿ, ಅವುಗಳ ನಿರ್ವಹಣೆ ಮಾಡಲಿದೆ.

ಈ ಬಸ್​​ಗಳು ಲೋ ಫ್ಲೋರ್ ಬಸ್​ಗಳಾಗಿದ್ದು, ಗ್ರಾಸ್ ಕಾಸ್ಟ್ ಕಾಂಟ್ರಾಕ್ಟ್ (ಜಿಸಿಸಿ) ಮಾದರಿಯಲ್ಲಿ ಕಾರ್ಯನಿರ್ವಹಿಸಲಿವೆ ಎಂದು ಬಿಎಂಟಿಸಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮೊದಲ ಬಸ್ ಅನ್ನು ಪ್ರಾಯೋಗಿಕ ಚಾಲನೆ ಮಾಡಲಾಗುತ್ತದೆ. ನಂತರ ಸೇವೆಗೆ ಮತ್ತಷ್ಟು ಬಸ್ ಗಳನ್ನು ನೀಡಲಾಗುತ್ತದೆ. ಹಂತ ಹಂತವಾಗಿ ಎಲ್ಲಾ 921 ಬಸ್‌ಗಳನ್ನು ಹಸ್ತಾಂತರಿಸಲಾಗುತ್ತದೆ. ಪ್ರಸ್ತುತ, ನಿಗಮವು ಸ್ವಿಚ್ ಮೊಬಿಲಿಟಿ ಲಿಮಿಟೆಡ್‌ನಿಂದ ನೇರಳೆ ಮತ್ತು ಜೆಬಿಎಂ ಆಟೋದ ಹಸಿರು ಬಣ್ಣದ ಎರಡು ಮಾದರಿಯ ಎಲೆಕ್ಟ್ರಿಕ್ ಬಸ್‌ಗಳನ್ನು ನಿರ್ವಹಿಸುತ್ತಿದೆ.

andolanait

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

2 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

3 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

4 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

6 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

9 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

9 hours ago