BREAKING NEWS

ಇಂದು ಬಿಎಂಟಿಸಿ ತೆಕ್ಕೆಗೆ ನಾನ್ ಎಸಿ ಎಲೆಕ್ಟ್ರಿಕ್ ಬಸ್!

ಬೆಂಗಳೂರು: ಟಾಟಾ ಮೋಟಾರ್ಸ್‌ನ ಅಂಗಸಂಸ್ಥೆಯಾದ ಟಿಎಂಎಲ್ ಸ್ಮಾರ್ಟ್ ಸಿಟಿ ಮೊಬಿಲಿಟಿ ಸೊಲ್ಯೂಷನ್ಸ್‌ನಿಂದ ಮೊದಲ ನಾನ್-ಎಸಿ ಎಲೆಕ್ಟ್ರಿಕ್ ಬಸ್ ಶುಕ್ರವಾರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಕೈ ಸೇರಲಿದೆ.

FAME II ಯೋಜನೆಯ ಅಡಿಯಲ್ಲಿ 921 ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸುವ ಒಪ್ಪಂದಕ್ಕೆ ಸಹಿ ಹಾಕಲಾಗಿದ್ದು, ಸಂಸ್ಥೆಯು ಇಂದು ಮೊದಲ ಬಸ್’ನ್ನು ಬಿಎಂಟಿಸಿಗೆ ನೀಡಲಿದೆ.

ಶಕ್ತಿ ಯೋಜನೆ ಪ್ರಾರಂಭವಾದ ನಂತರ, ರಾಜ್ಯದಲ್ಲಿ ಸಾರಿಗೆ ಬಸ್ ಗಳಲ್ಲಿ ಸಂಚರಿಸುವ ಜನರ ಸಂಖ್ಯೆ ಹೆಚ್ಚಳವಾಗಿದೆ. ಪ್ರತೀನಿತ್ಯ ಸುಮಾರು 40 ಲಕ್ಷ ಜನರು ಬಿಎಂಟಿಸಿ ಬಸ್ ಗಳಲ್ಲಿ ಸಂಚರಿಸುತ್ತಿದ್ದಾರೆ.

ಒಪ್ಪಂದದಂತೆ TML ಸ್ಮಾರ್ಟ್ ಸಿಟಿ ಮೊಬಿಲಿಟಿ ಸೊಲ್ಯೂಷನ್ಸ್ 921 ಬಸ್‌ಗಳನ್ನು ಬಿಎಂಟಿಸಿಗೆ ನೀಡಲಿದ್ದು, 12 ವರ್ಷಗಳವರೆಗೆ ಬಸ್ ಗಳನ್ನು ಪೂರೈಸಿ, ಅವುಗಳ ನಿರ್ವಹಣೆ ಮಾಡಲಿದೆ.

ಈ ಬಸ್​​ಗಳು ಲೋ ಫ್ಲೋರ್ ಬಸ್​ಗಳಾಗಿದ್ದು, ಗ್ರಾಸ್ ಕಾಸ್ಟ್ ಕಾಂಟ್ರಾಕ್ಟ್ (ಜಿಸಿಸಿ) ಮಾದರಿಯಲ್ಲಿ ಕಾರ್ಯನಿರ್ವಹಿಸಲಿವೆ ಎಂದು ಬಿಎಂಟಿಸಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮೊದಲ ಬಸ್ ಅನ್ನು ಪ್ರಾಯೋಗಿಕ ಚಾಲನೆ ಮಾಡಲಾಗುತ್ತದೆ. ನಂತರ ಸೇವೆಗೆ ಮತ್ತಷ್ಟು ಬಸ್ ಗಳನ್ನು ನೀಡಲಾಗುತ್ತದೆ. ಹಂತ ಹಂತವಾಗಿ ಎಲ್ಲಾ 921 ಬಸ್‌ಗಳನ್ನು ಹಸ್ತಾಂತರಿಸಲಾಗುತ್ತದೆ. ಪ್ರಸ್ತುತ, ನಿಗಮವು ಸ್ವಿಚ್ ಮೊಬಿಲಿಟಿ ಲಿಮಿಟೆಡ್‌ನಿಂದ ನೇರಳೆ ಮತ್ತು ಜೆಬಿಎಂ ಆಟೋದ ಹಸಿರು ಬಣ್ಣದ ಎರಡು ಮಾದರಿಯ ಎಲೆಕ್ಟ್ರಿಕ್ ಬಸ್‌ಗಳನ್ನು ನಿರ್ವಹಿಸುತ್ತಿದೆ.

andolanait

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

1 hour ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

2 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

2 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

2 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

2 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

2 hours ago