ರಾಮನಗರ: ಪರಾರಿಯಾಗಿರುವ ಕೈಲಾಸ ದೇಶದ ಸಂಸ್ಥಾಪಕ, ಬಿಡದಿ ಧ್ಯಾನಪೀಠದ ಮುಖ್ಯಸ್ಥ ನಿತ್ಯಾನಂದ ಸ್ವಾಮೀಜಿಯ ಇಬ್ಬರು ಶಿಷ್ಯರ ವಿರುದ್ಧ ಇಲ್ಲಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
ಈ ಸಂಬಂಧ ರಾಮನಗರ ಜಿಲ್ಲಾ ನ್ಯಾಯಾಲಯವು ನಿತ್ಯಾನಂದನ ಶಿಷ್ಯರಾದ ಶಿವವಲ್ಲಭನೇನಿ ಮತ್ತು ಜಮುನಾ ರಾಣಿ ವಿರುದ್ಧ ವಾರಂಟ್ ಜಾರಿಯಾಗಿದೆ.
ಭಕ್ತೆಯೊಬ್ಬರ ಮೇಲೆ ನಿತ್ಯಾನಂದ ಸ್ವಾಮೀಜಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಅವರ ಇಬ್ಬರು ಅನುಯಾಯಿಗಳನ್ನು ಮೂರು ಮತ್ತು ಆರನೇ ಆರೋಪಿಗಳೆಂದು ಹೆಸರಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ನ ಎಲ್ಲಾ ತೀರ್ಪುಗಳನ್ನು ಪರಿಶೀಲಿಸಿದ ನಂತರ ನ್ಯಾಯಾಲಯವು ಈ ಆದೇಶವನ್ನು ನೀಡಿದೆ. ಈ ಇಬ್ಬರು ಆರೋಪಿಗಳು ವಿಚಾರಣೆಗಾಗಿ ನ್ಯಾಯಾಲಯದ ಎದುರು ಹಾಜರಾಗದೆ, ಕೋರ್ಟ್ನ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಆದೇಶ ನೀಡಿದೆ.
ಮುಂದಿನ ವಿಚಾರಣೆಯನ್ನು ಆಗಸ್ಟ್ 5ಕ್ಕೆ ಮುಂದೂಡಲಾಗಿದೆ. 2019ರಲ್ಲಿ ತನ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾದ ನಂತರ ನಿತ್ಯಾನಂದ ದೇಶ ಬಿಟ್ಟು ಪರಾರಿಯಾಗಿದ್ದಾರೆ.
ಈ ವರ್ಷದ ಆರಂಭದಲ್ಲಿ ಜಿನೆವಾದಲ್ಲಿ ನಡೆದ ವಿಶ್ವಸಂಸ್ಥೆಯ ಸಭೆಯಲ್ಲಿ ಅವರ ಶಿಷ್ಯೆ ವಿಜಯಪ್ರಿಯಾ ನಿತ್ಯಾನಂದ ಅವರು ಇತರ ಐದು ಮಹಿಳೆಯರೊಂದಿಗೆ ಅವರ ದೇಶ ‘ಕೈಲಾಸ’ವನ್ನು ಪ್ರತಿನಿಧಿಸಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…