BREAKING NEWS

ನಿತ್ಯಾನಂದನ ಇಬ್ಬರು ಶಿಷ್ಯೆಯರ ವಿರುದ್ಧ ಜಾಮೀನು ರಹಿತ ವಾರಂಟ್

ರಾಮನಗರ: ಪರಾರಿಯಾಗಿರುವ ಕೈಲಾಸ ದೇಶದ ಸಂಸ್ಥಾಪಕ, ಬಿಡದಿ ಧ್ಯಾನಪೀಠದ ಮುಖ್ಯಸ್ಥ ನಿತ್ಯಾನಂದ ಸ್ವಾಮೀಜಿಯ ಇಬ್ಬರು ಶಿಷ್ಯರ ವಿರುದ್ಧ ಇಲ್ಲಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ಈ ಸಂಬಂಧ ರಾಮನಗರ ಜಿಲ್ಲಾ ನ್ಯಾಯಾಲಯವು ನಿತ್ಯಾನಂದನ ಶಿಷ್ಯರಾದ ಶಿವವಲ್ಲಭನೇನಿ ಮತ್ತು ಜಮುನಾ ರಾಣಿ ವಿರುದ್ಧ ವಾರಂಟ್ ಜಾರಿಯಾಗಿದೆ.

ಭಕ್ತೆಯೊಬ್ಬರ ಮೇಲೆ ನಿತ್ಯಾನಂದ ಸ್ವಾಮೀಜಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಅವರ ಇಬ್ಬರು ಅನುಯಾಯಿಗಳನ್ನು ಮೂರು ಮತ್ತು ಆರನೇ ಆರೋಪಿಗಳೆಂದು ಹೆಸರಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನ ಎಲ್ಲಾ ತೀರ್ಪುಗಳನ್ನು ಪರಿಶೀಲಿಸಿದ ನಂತರ ನ್ಯಾಯಾಲಯವು ಈ ಆದೇಶವನ್ನು ನೀಡಿದೆ. ಈ ಇಬ್ಬರು ಆರೋಪಿಗಳು ವಿಚಾರಣೆಗಾಗಿ ನ್ಯಾಯಾಲಯದ ಎದುರು ಹಾಜರಾಗದೆ, ಕೋರ್ಟ್‌ನ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಆದೇಶ ನೀಡಿದೆ.

ಮುಂದಿನ ವಿಚಾರಣೆಯನ್ನು ಆಗಸ್ಟ್ 5ಕ್ಕೆ ಮುಂದೂಡಲಾಗಿದೆ. 2019ರಲ್ಲಿ ತನ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾದ ನಂತರ ನಿತ್ಯಾನಂದ ದೇಶ ಬಿಟ್ಟು ಪರಾರಿಯಾಗಿದ್ದಾರೆ.

ಈ ವರ್ಷದ ಆರಂಭದಲ್ಲಿ ಜಿನೆವಾದಲ್ಲಿ ನಡೆದ ವಿಶ್ವಸಂಸ್ಥೆಯ ಸಭೆಯಲ್ಲಿ ಅವರ ಶಿಷ್ಯೆ ವಿಜಯಪ್ರಿಯಾ ನಿತ್ಯಾನಂದ ಅವರು ಇತರ ಐದು ಮಹಿಳೆಯರೊಂದಿಗೆ ಅವರ ದೇಶ ‘ಕೈಲಾಸ’ವನ್ನು ಪ್ರತಿನಿಧಿಸಿದರು.

andolanait

Recent Posts

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

2 mins ago

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

15 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

16 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

16 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

18 hours ago