ಬೆಂಗಳೂರು : ಜೈಲಿನಲ್ಲಿ ಐಷಾರಾಮಿ ಸೌಲಭ್ಯ ನೀಡಲಾಗಿತ್ತು ಎಂಬ ವಿಚಾರ ಸಂಬಂಧ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಹಾಗೂ ಇಳವರಸಿಗೆ ಲೋಕಾಯುಕ್ತ ವಿಶೇಷ ಕೋರ್ಟ್ ವಾರೆಂಟ್ ಜಾರಿ ಮಾಡಿದೆ.
ಕೋರ್ಟ್ ವಿಚಾರಣೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಶ್ಯೂರಿಟಿಗಳಿಗೂ ಕೂಡ ವಾರೆಂಟ್ ಜಾರಿ ಮಾಡಿದೆ. ಲೋಕಾಯುಕ್ತ ಪೊಲೀಸರು ಆರೋಪಪಟ್ಟಿ ದಾಖಲಿಸಿದ್ದರು. ಜೈಲು ಅಧಿಕಾರಿಗಳ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿತ್ತು. ತಮ್ಮ ಪ್ರಕರಣದ ರದ್ದು ಕೋರಿ ಹೈಕೋರ್ಟ್ಗೆ ಶಶಿಕಲಾ ಅರ್ಜಿ ಸಲ್ಲಿಸಿದ್ದರು. ಆದರೆ ಸೋಮವಾರ ವಿಚಾರಣೆ ಸಂದರ್ಭದಲ್ಲಿ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ.
ಜಯಲಲಿತಾ ಅವರ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಹಾಗೂ ಇಳವರಸಿ ಇಬ್ಬರೂ ಪರಪ್ಪನ ಅಗ್ರಹಾರದಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಈ ಸಂದರ್ಭದಲ್ಲಿ ಜೈಲಿನಲ್ಲಿಯೂ ಐಷಾರಾಮಿ ಸೌಕರ್ಯಗಳನ್ನು ಪಡೆದಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು.
ಅಧಿಕಾರಿಗಳಿಗೆ 2 ಕೋಟಿ ಲಂಚ ನೀಡಿ ಬೆಂಗಳೂರು ಜೈಲಿನ ಹೊರಗೆ ಶಾಪಿಂಗ್ ಗೆ ತೆರಳಿದ್ದ ಶಶಿಕಲಾ ಹಾಗೂ ಇಳವರಸಿಯ ವೀಡಿಯೋ ಸಿಕ್ಕಿತ್ತು. ತಮಿಳುನಾಡು ಮತ್ತು ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಈ ಘಟನೆ ಕುರಿತು ಬೆಂಗಳೂರಿನ ಲೋಕಾಯುಕ್ತ ನ್ಯಾಯಾಲಯದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ಆದರೆ ಬೆಂಗಳೂರು ಲೋಕಾಯುಕ್ತ ನ್ಯಾಯಾಲಯದ ವಿಚಾರಣೆಗೆ ಇಳವರಸಿ, ಶಶಿಕಲಾ ಹಾಜರಾಗಿರಲಿಲ್ಲ. ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಲಾಗಿದೆ.
ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ…
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…