ಬೆಂಗಳೂರು : ಜೈಲಿನಲ್ಲಿ ಐಷಾರಾಮಿ ಸೌಲಭ್ಯ ನೀಡಲಾಗಿತ್ತು ಎಂಬ ವಿಚಾರ ಸಂಬಂಧ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಹಾಗೂ ಇಳವರಸಿಗೆ ಲೋಕಾಯುಕ್ತ ವಿಶೇಷ ಕೋರ್ಟ್ ವಾರೆಂಟ್ ಜಾರಿ ಮಾಡಿದೆ.
ಕೋರ್ಟ್ ವಿಚಾರಣೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಶ್ಯೂರಿಟಿಗಳಿಗೂ ಕೂಡ ವಾರೆಂಟ್ ಜಾರಿ ಮಾಡಿದೆ. ಲೋಕಾಯುಕ್ತ ಪೊಲೀಸರು ಆರೋಪಪಟ್ಟಿ ದಾಖಲಿಸಿದ್ದರು. ಜೈಲು ಅಧಿಕಾರಿಗಳ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿತ್ತು. ತಮ್ಮ ಪ್ರಕರಣದ ರದ್ದು ಕೋರಿ ಹೈಕೋರ್ಟ್ಗೆ ಶಶಿಕಲಾ ಅರ್ಜಿ ಸಲ್ಲಿಸಿದ್ದರು. ಆದರೆ ಸೋಮವಾರ ವಿಚಾರಣೆ ಸಂದರ್ಭದಲ್ಲಿ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ.
ಜಯಲಲಿತಾ ಅವರ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಹಾಗೂ ಇಳವರಸಿ ಇಬ್ಬರೂ ಪರಪ್ಪನ ಅಗ್ರಹಾರದಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಈ ಸಂದರ್ಭದಲ್ಲಿ ಜೈಲಿನಲ್ಲಿಯೂ ಐಷಾರಾಮಿ ಸೌಕರ್ಯಗಳನ್ನು ಪಡೆದಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು.
ಅಧಿಕಾರಿಗಳಿಗೆ 2 ಕೋಟಿ ಲಂಚ ನೀಡಿ ಬೆಂಗಳೂರು ಜೈಲಿನ ಹೊರಗೆ ಶಾಪಿಂಗ್ ಗೆ ತೆರಳಿದ್ದ ಶಶಿಕಲಾ ಹಾಗೂ ಇಳವರಸಿಯ ವೀಡಿಯೋ ಸಿಕ್ಕಿತ್ತು. ತಮಿಳುನಾಡು ಮತ್ತು ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಈ ಘಟನೆ ಕುರಿತು ಬೆಂಗಳೂರಿನ ಲೋಕಾಯುಕ್ತ ನ್ಯಾಯಾಲಯದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ಆದರೆ ಬೆಂಗಳೂರು ಲೋಕಾಯುಕ್ತ ನ್ಯಾಯಾಲಯದ ವಿಚಾರಣೆಗೆ ಇಳವರಸಿ, ಶಶಿಕಲಾ ಹಾಜರಾಗಿರಲಿಲ್ಲ. ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಲಾಗಿದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…