ಬೆಂಗಳೂರು : ಜೈಲಿನಲ್ಲಿ ಐಷಾರಾಮಿ ಸೌಲಭ್ಯ ನೀಡಲಾಗಿತ್ತು ಎಂಬ ವಿಚಾರ ಸಂಬಂಧ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಹಾಗೂ ಇಳವರಸಿಗೆ ಲೋಕಾಯುಕ್ತ ವಿಶೇಷ ಕೋರ್ಟ್ ವಾರೆಂಟ್ ಜಾರಿ ಮಾಡಿದೆ.
ಕೋರ್ಟ್ ವಿಚಾರಣೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಶ್ಯೂರಿಟಿಗಳಿಗೂ ಕೂಡ ವಾರೆಂಟ್ ಜಾರಿ ಮಾಡಿದೆ. ಲೋಕಾಯುಕ್ತ ಪೊಲೀಸರು ಆರೋಪಪಟ್ಟಿ ದಾಖಲಿಸಿದ್ದರು. ಜೈಲು ಅಧಿಕಾರಿಗಳ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿತ್ತು. ತಮ್ಮ ಪ್ರಕರಣದ ರದ್ದು ಕೋರಿ ಹೈಕೋರ್ಟ್ಗೆ ಶಶಿಕಲಾ ಅರ್ಜಿ ಸಲ್ಲಿಸಿದ್ದರು. ಆದರೆ ಸೋಮವಾರ ವಿಚಾರಣೆ ಸಂದರ್ಭದಲ್ಲಿ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ.
ಜಯಲಲಿತಾ ಅವರ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಹಾಗೂ ಇಳವರಸಿ ಇಬ್ಬರೂ ಪರಪ್ಪನ ಅಗ್ರಹಾರದಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಈ ಸಂದರ್ಭದಲ್ಲಿ ಜೈಲಿನಲ್ಲಿಯೂ ಐಷಾರಾಮಿ ಸೌಕರ್ಯಗಳನ್ನು ಪಡೆದಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು.
ಅಧಿಕಾರಿಗಳಿಗೆ 2 ಕೋಟಿ ಲಂಚ ನೀಡಿ ಬೆಂಗಳೂರು ಜೈಲಿನ ಹೊರಗೆ ಶಾಪಿಂಗ್ ಗೆ ತೆರಳಿದ್ದ ಶಶಿಕಲಾ ಹಾಗೂ ಇಳವರಸಿಯ ವೀಡಿಯೋ ಸಿಕ್ಕಿತ್ತು. ತಮಿಳುನಾಡು ಮತ್ತು ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಈ ಘಟನೆ ಕುರಿತು ಬೆಂಗಳೂರಿನ ಲೋಕಾಯುಕ್ತ ನ್ಯಾಯಾಲಯದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ಆದರೆ ಬೆಂಗಳೂರು ಲೋಕಾಯುಕ್ತ ನ್ಯಾಯಾಲಯದ ವಿಚಾರಣೆಗೆ ಇಳವರಸಿ, ಶಶಿಕಲಾ ಹಾಜರಾಗಿರಲಿಲ್ಲ. ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಲಾಗಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…