ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಶಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಕಳೆದ 15 ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿರುವ ಮತ್ತು ಸಾಗರೋತ್ತರ ಕನ್ನಡಿಗರ ಸಂಘದ ಜಂಟಿ ಕಾರ್ಯದರ್ಶಿ ಎಂ.ರವಿ ಅವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾಯಮೂರ್ತಿ ವಿಜಯ್ಕುಮಾರ್ ಎ.ಪಾಟೀಲ್ ಇದ್ದ ರಜಾ ಕಾಲದ ಪೀಠದಿಂದ ಪಿಐಎಲ್ ವಜಾಗೊಳಿಸಿ ಆದೇಶ ನೀಡಲಾಗಿದೆ.
ಆಯೋಗದ ಪರ ವಕೀಲರು ವಾದ ಮಂಡಿಸಿ, ಮತದಾನದ ಹಕ್ಕು ಮೂಲ ಹಕ್ಕಲ್ಲ. ಅದು ಕಾನೂನಿನ ಅನುಪಸ್ಥಿತಿಯಲ್ಲಿ ಅವರು ಮತದಾನ ಹಕ್ಕು ಪಡೆದುಕೊಳ್ಳಲು ಆಗುವುದಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.
ಇದನ್ನು ಪರಿಗಣಿಸಿದ ನ್ಯಾಯಪೀಠ ಅನಿವಾಸಿ ಭಾರತೀಯರಿಗೆ ಮತದಾನದ ಹಕ್ಕು ನೀಡಬೇಕು ಎನ್ನುವುದು ದೀರ್ಘಕಾಲದ ಚುನಾವಣಾ ನ್ಯಾಯಾಶಾಸ್ತ್ರಕ್ಕೆ ವಿರುದ್ಧವಾಗಿದ್ದು, ಹೀಗಾಗಿ ಅರ್ಜಿದಾರರ ಮನವಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…