BREAKING NEWS

ಅನಿವಾಸಿ ಭಾರತೀಯರು ಮತದಾನ ಮಾಡುವಂತಿಲ್ಲ: ಹೈಕೋರ್ಟ್‌

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಶಕ್ತಿ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಕಳೆದ 15 ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿರುವ ಮತ್ತು ಸಾಗರೋತ್ತರ ಕನ್ನಡಿಗರ ಸಂಘದ ಜಂಟಿ ಕಾರ್ಯದರ್ಶಿ ಎಂ.ರವಿ ಅವರು ಸಲ್ಲಿಸಿದ್ದ ಪಿಐಎಲ್‌ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಮತ್ತು ನ್ಯಾಯಮೂರ್ತಿ ವಿಜಯ್‌ಕುಮಾರ್‌ ಎ.ಪಾಟೀಲ್‌ ಇದ್ದ ರಜಾ ಕಾಲದ ಪೀಠದಿಂದ ಪಿಐಎಲ್‌ ವಜಾಗೊಳಿಸಿ ಆದೇಶ ನೀಡಲಾಗಿದೆ.

ಆಯೋಗದ ಪರ ವಕೀಲರು ವಾದ ಮಂಡಿಸಿ, ಮತದಾನದ ಹಕ್ಕು ಮೂಲ ಹಕ್ಕಲ್ಲ. ಅದು ಕಾನೂನಿನ ಅನುಪಸ್ಥಿತಿಯಲ್ಲಿ ಅವರು ಮತದಾನ ಹಕ್ಕು ಪಡೆದುಕೊಳ್ಳಲು ಆಗುವುದಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

ಇದನ್ನು ಪರಿಗಣಿಸಿದ ನ್ಯಾಯಪೀಠ ಅನಿವಾಸಿ ಭಾರತೀಯರಿಗೆ ಮತದಾನದ ಹಕ್ಕು ನೀಡಬೇಕು ಎನ್ನುವುದು ದೀರ್ಘಕಾಲದ ಚುನಾವಣಾ ನ್ಯಾಯಾಶಾಸ್ತ್ರಕ್ಕೆ ವಿರುದ್ಧವಾಗಿದ್ದು, ಹೀಗಾಗಿ ಅರ್ಜಿದಾರರ ಮನವಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

andolanait

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

5 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

5 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

5 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

5 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

17 hours ago