BREAKING NEWS

ವರುಣಾರ್ಭಟಕ್ಕೆ ತತ್ತರಿಸಿದ ಉತ್ತರ ಭಾರತ

ಹೊಸದಿಲ್ಲಿ : ಉತ್ತರ ಭಾರತದ ಹಲವು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಲ್ಲಿ ಕನಿಷ್ಠ 12 ಮಂದಿ ಮೃತಪಟ್ಟಿದ್ದಾರೆ. ಮುಂದಿನ ಕೆಲವು ದಿನ ವರುಣನ ಆರ್ಭಟ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ದೆಹಲಿ, ಹರ್ಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಪಂಜಾಬ್ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿಯಿಂದ ವಿಪರೀತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಡಿ) ಹೇಳಿದೆ.
ಉತ್ತರ ಭಾರತದ ಮೇಲೆ ಪಶ್ಚಿಮ ಮಾರುತಗಳು ವ್ಯಾಪಿಸಿದ್ದು, ರಾಜಧಾನಿ ದಿಲ್ಲಿ ಸೇರಿದಂತೆ ಅನೇಕ ಭಾಗಗಳಲ್ಲಿ ಶನಿವಾರ ತೀವ್ರ ಮಳೆಗೆ ಕಾರಣವಾಗಿದೆ. ಈ ಮುಂಗಾರು ಅವಧಿಯ ಮೊದಲ ಭಾರಿ ಮಳೆ ಇದಾಗಿದೆ.

ರಾಷ್ಟ್ರ ರಾಜಧಾನಿಯ ಅನೇಕ ಭಾಗಗಳಲ್ಲಿ ರಸ್ತೆಗಳು ಜಲಾವೃತವಾಗಿರುವುದರಿಂದ ಭಾರಿ ಸಂಚಾರ ದಟ್ಟಣೆ ಉಂಟಾಗಿದೆ. ನಗರದಲ್ಲಿ ಕಳೆದ 24 ಗಂಟೆಗಳಲ್ಲಿ 153 ಮಿಮೀ ಮಳೆ ಸುರಿದಿದೆ. 41 ವರ್ಷಗಳ ಬಳಿಕ, 1982ರ ಜುಲೈ ನಂತರ ದಿನವೊಂದರಲ್ಲಿ ದಾಖಲಾದ ಅತ್ಯಧಿಕ ಮಳೆ ಪ್ರಮಾಣ ಇದಾಗಿದೆ. 2003ರ ಜುಲೈ 10ರಂದು ನಗರದಲ್ಲಿ 133.4 ಮಿಮೀ ಮಳೆ ಸುರಿದಿತ್ತು. 1958ರ ಜುಲೈ 21ರಂದು ಸುರಿದಿದ್ದ 266.2 ಮಿಮೀ ಸಾರ್ವಕಾಲಿಕ ದಾಖಲೆಯಾಗಿದೆ. ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಪಾರ್ಕ್‌, ಅಂಡರ್‌ಪಾಸ್, ಮಾರುಕಟ್ಟೆಗಳು ಮಾತ್ರವಲ್ಲದೆ, ಆಸ್ಪತ್ರೆ ಆವರಣಗಳೂ ನದಿಯಂತಾಗಿವೆ.

ರಸ್ತೆಯಲ್ಲಿ ಮೊಣಕಾಲುದ್ದದ ನೀರಿನಲ್ಲಿ ವಾಹನ ಸವಾರರು ಮತ್ತು ಪಾದಚಾರಿಗಳು ಪರದಾಡುವುದು ಕಂಡುಬಂತು. ನಗರದ ಚರಂಡಿ ಮೂಲಸೌಕರ್ಯದ ಬಗ್ಗೆ ಇದು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಗುರುಗ್ರಾಮದ ಕೆಲವು ಪ್ರದೇಶಗಳಲ್ಲಿ ಕೂಡ ನೀರು ತುಂಬಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇಲ್ಲಿ ಕೂಡ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

lokesh

Recent Posts

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

7 hours ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

7 hours ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

8 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

8 hours ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

9 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

10 hours ago