BREAKING NEWS

ಎರಡು ಬ್ಯಾಲೆಸ್ಟಿಕ್ ಕ್ಷಿಪಣಿಗಳ ಪ್ರಯೋಗಿಸಿದ ಉತ್ತರ ಕೊರಿಯಾ

ವಾಷಿಂಗ್ಟನ್:  ಬರೊಬ್ಬರಿ ನಾಲ್ಕು ದಶಕಗಳ ಬಳಿಕ ದಕ್ಷಿಣ ಕೊರಿಯಾದ ಬಂದರಿಗೆ ಅಮೆರಿಕಾದ ಬ್ಯಾಲಿಸ್ಟಿಕ್ ಕ್ಷಿಪಣಿ ಜಲಾಂತರ್ಗಾಮಿ ನೌಕೆ ಆಗಮಿಸಿದ್ದಕ್ಕೆ ತಿರುಗೇಟು ಎಂಬಂತೆ ಬುಧವಾರ ಬೆಳಗ್ಗೆ ಉತ್ತರ ಕೊರಿಯಾವು ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿದೆ.

ಉತ್ತರ ಕೊರಿಯಾದ ಎರಡೂ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಜಪಾನ್‌ನ ವಿಶೇಷ ಆರ್ಥಿಕ ವಲಯದ ಹೊರಗೆ ಬಿದ್ದಿವೆ ಎಂದು ಜಪಾನ್ ರಕ್ಷಣಾ ಸಚಿವಾಲಯ ತಿಳಿಸಿದೆ.

ಮೊದಲ ಕ್ಷಿಪಣಿಯು ೫೦ ಕಿಮೀ ಎತ್ತರವನ್ನು ತಲುಪಿ ೫೫೦ ಕಿಮೀ ವ್ಯಾಪ್ತಿಯನ್ನು ಕ್ರಮಿಸಿದರೆ ಎರಡನೆಯ ಕ್ಷಿಪಣಿಯು ೫೦ ಕಿಮೀ ಎತ್ತರಕ್ಕೆ ಏರಿತು ಮತ್ತು ೬೦೦ ಕಿ.ಮೀ. ದೂರಕ್ಕೆ ಹಾರಿತು ಎಂದು ಜಪಾನಿನ ರಕ್ಷಣಾ ಸಚಿವ ಯಸುಕಾಜು ಹಮಡಾ ಸುದ್ದಿಗಾರರಿಗೆ ತಿಳಿಸಿದರು.

ಇನ್ನು ಉತ್ತರ ಕೊರಿಯಾ ಕ್ರಮವನ್ನು ದಕ್ಷಿಣ ಕೊರಿಯಾದ ಸೇನಾ ಜಂಟಿ ಮುಖ್ಯಸ್ಥರು (ಜೆಸಿಎಸ್) ಖಂಡನೆ ವ್ಯಕ್ತಪಡಿಸಿದ್ದಾರೆ. ಉತ್ತರ ಕೊರಿಯಾದ ಸತತ ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾವಣೆಗಳು ಕೊರಿಯನ್ ಪರ್ಯಾಯ ದ್ವೀಪ ಮತ್ತು ಅಂತಾರಾಷ್ಟ್ರೀಯ ಸಮುದಾಯದ ಶಾಂತಿ ಮತ್ತು ಸ್ಥಿರತೆಯನ್ನು ಹಾಳುಮಾಡುವ ಗಂಭೀರ ಪ್ರಚೋದನಕಾರಿ ಕೃತ್ಯಗಳಾಗಿವೆ. ಅಲ್ಲದೆ ಕ್ಷಿಪಣಿ ಉಡಾವಣೆಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿವೆ ಎಂದು ಜೆಸಿಎಸ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿಗಿನ ದಿನಗಳಲ್ಲಿ ದಕ್ಷಿಣ ಕೊರಿಯಾ ಹಾಗೂ ಜಪಾನ್ ಕರಾವಳಿ ತೀರಗಳಿಗೆ ಅಮೆರಿಕಾ ತನ್ನ ಸೇನಾ ಪರಿಕರಗಳನ್ನು ಸಾಗಿಸುವ ಕಾರ್ಯಕ್ಕೆ ಹೆಚ್ಚಿನ ವೇಗ ನೀಡಿದ್ದು, ಸಹಜವಾಗಿಯೇ ಇದಕ್ಕೆ ಉತ್ತರ ಕೊರಿಯಾ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೆ ದಕ್ಷಿಣ ಕೊರಿಯಾ ಕಡಲ ತಟದಲ್ಲಿ ಅಮೆರಿಕಾ ಹೆಚ್ಚು ಸಕ್ರಿಯವಾಗಿದ್ದು, ಮಿಲಿಟರಿ ಅಭ್ಯಾಸದಲ್ಲಿ ಕೂಡ ತೊಡಗಿಸಿಕೊಂಡಿದೆ.

andolanait

Recent Posts

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

8 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

27 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

50 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago

ಓದುಗರ ಪತ್ರ: ರತನ್‌ ಟಾಟಾರಿಗೆ ಭಾರತರತ್ನ ನೀಡಿ

ಕೆಲ ಗಣ್ಯರು ನಿಧನರಾದಾಗ ದುಃಖವಾಗುತ್ತದೆ. ಇನ್ನೂ ಕೆಲ ಗಣ್ಯರನ್ನು ಕಳೆದುಕೊಂಡಾಗ ದುಃಖದ ಕೋಡಿಯೇ ಹರಿಯುತ್ತದೆ; ದೇಶಾದ್ಯಂತ ಮೌನ ಹೆಪ್ಪುಗಟ್ಟುತ್ತದೆ. ಹೀಗೆ…

3 hours ago