ವಾಷಿಂಗ್ಟನ್: ಬರೊಬ್ಬರಿ ನಾಲ್ಕು ದಶಕಗಳ ಬಳಿಕ ದಕ್ಷಿಣ ಕೊರಿಯಾದ ಬಂದರಿಗೆ ಅಮೆರಿಕಾದ ಬ್ಯಾಲಿಸ್ಟಿಕ್ ಕ್ಷಿಪಣಿ ಜಲಾಂತರ್ಗಾಮಿ ನೌಕೆ ಆಗಮಿಸಿದ್ದಕ್ಕೆ ತಿರುಗೇಟು ಎಂಬಂತೆ ಬುಧವಾರ ಬೆಳಗ್ಗೆ ಉತ್ತರ ಕೊರಿಯಾವು ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿದೆ.
ಉತ್ತರ ಕೊರಿಯಾದ ಎರಡೂ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಜಪಾನ್ನ ವಿಶೇಷ ಆರ್ಥಿಕ ವಲಯದ ಹೊರಗೆ ಬಿದ್ದಿವೆ ಎಂದು ಜಪಾನ್ ರಕ್ಷಣಾ ಸಚಿವಾಲಯ ತಿಳಿಸಿದೆ.
ಮೊದಲ ಕ್ಷಿಪಣಿಯು ೫೦ ಕಿಮೀ ಎತ್ತರವನ್ನು ತಲುಪಿ ೫೫೦ ಕಿಮೀ ವ್ಯಾಪ್ತಿಯನ್ನು ಕ್ರಮಿಸಿದರೆ ಎರಡನೆಯ ಕ್ಷಿಪಣಿಯು ೫೦ ಕಿಮೀ ಎತ್ತರಕ್ಕೆ ಏರಿತು ಮತ್ತು ೬೦೦ ಕಿ.ಮೀ. ದೂರಕ್ಕೆ ಹಾರಿತು ಎಂದು ಜಪಾನಿನ ರಕ್ಷಣಾ ಸಚಿವ ಯಸುಕಾಜು ಹಮಡಾ ಸುದ್ದಿಗಾರರಿಗೆ ತಿಳಿಸಿದರು.
ಇನ್ನು ಉತ್ತರ ಕೊರಿಯಾ ಕ್ರಮವನ್ನು ದಕ್ಷಿಣ ಕೊರಿಯಾದ ಸೇನಾ ಜಂಟಿ ಮುಖ್ಯಸ್ಥರು (ಜೆಸಿಎಸ್) ಖಂಡನೆ ವ್ಯಕ್ತಪಡಿಸಿದ್ದಾರೆ. ಉತ್ತರ ಕೊರಿಯಾದ ಸತತ ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾವಣೆಗಳು ಕೊರಿಯನ್ ಪರ್ಯಾಯ ದ್ವೀಪ ಮತ್ತು ಅಂತಾರಾಷ್ಟ್ರೀಯ ಸಮುದಾಯದ ಶಾಂತಿ ಮತ್ತು ಸ್ಥಿರತೆಯನ್ನು ಹಾಳುಮಾಡುವ ಗಂಭೀರ ಪ್ರಚೋದನಕಾರಿ ಕೃತ್ಯಗಳಾಗಿವೆ. ಅಲ್ಲದೆ ಕ್ಷಿಪಣಿ ಉಡಾವಣೆಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿವೆ ಎಂದು ಜೆಸಿಎಸ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇತ್ತೀಚಿಗಿನ ದಿನಗಳಲ್ಲಿ ದಕ್ಷಿಣ ಕೊರಿಯಾ ಹಾಗೂ ಜಪಾನ್ ಕರಾವಳಿ ತೀರಗಳಿಗೆ ಅಮೆರಿಕಾ ತನ್ನ ಸೇನಾ ಪರಿಕರಗಳನ್ನು ಸಾಗಿಸುವ ಕಾರ್ಯಕ್ಕೆ ಹೆಚ್ಚಿನ ವೇಗ ನೀಡಿದ್ದು, ಸಹಜವಾಗಿಯೇ ಇದಕ್ಕೆ ಉತ್ತರ ಕೊರಿಯಾ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೆ ದಕ್ಷಿಣ ಕೊರಿಯಾ ಕಡಲ ತಟದಲ್ಲಿ ಅಮೆರಿಕಾ ಹೆಚ್ಚು ಸಕ್ರಿಯವಾಗಿದ್ದು, ಮಿಲಿಟರಿ ಅಭ್ಯಾಸದಲ್ಲಿ ಕೂಡ ತೊಡಗಿಸಿಕೊಂಡಿದೆ.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…