BREAKING NEWS

ಎರಡು ಬ್ಯಾಲೆಸ್ಟಿಕ್ ಕ್ಷಿಪಣಿಗಳ ಪ್ರಯೋಗಿಸಿದ ಉತ್ತರ ಕೊರಿಯಾ

ವಾಷಿಂಗ್ಟನ್:  ಬರೊಬ್ಬರಿ ನಾಲ್ಕು ದಶಕಗಳ ಬಳಿಕ ದಕ್ಷಿಣ ಕೊರಿಯಾದ ಬಂದರಿಗೆ ಅಮೆರಿಕಾದ ಬ್ಯಾಲಿಸ್ಟಿಕ್ ಕ್ಷಿಪಣಿ ಜಲಾಂತರ್ಗಾಮಿ ನೌಕೆ ಆಗಮಿಸಿದ್ದಕ್ಕೆ ತಿರುಗೇಟು ಎಂಬಂತೆ ಬುಧವಾರ ಬೆಳಗ್ಗೆ ಉತ್ತರ ಕೊರಿಯಾವು ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿದೆ.

ಉತ್ತರ ಕೊರಿಯಾದ ಎರಡೂ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಜಪಾನ್‌ನ ವಿಶೇಷ ಆರ್ಥಿಕ ವಲಯದ ಹೊರಗೆ ಬಿದ್ದಿವೆ ಎಂದು ಜಪಾನ್ ರಕ್ಷಣಾ ಸಚಿವಾಲಯ ತಿಳಿಸಿದೆ.

ಮೊದಲ ಕ್ಷಿಪಣಿಯು ೫೦ ಕಿಮೀ ಎತ್ತರವನ್ನು ತಲುಪಿ ೫೫೦ ಕಿಮೀ ವ್ಯಾಪ್ತಿಯನ್ನು ಕ್ರಮಿಸಿದರೆ ಎರಡನೆಯ ಕ್ಷಿಪಣಿಯು ೫೦ ಕಿಮೀ ಎತ್ತರಕ್ಕೆ ಏರಿತು ಮತ್ತು ೬೦೦ ಕಿ.ಮೀ. ದೂರಕ್ಕೆ ಹಾರಿತು ಎಂದು ಜಪಾನಿನ ರಕ್ಷಣಾ ಸಚಿವ ಯಸುಕಾಜು ಹಮಡಾ ಸುದ್ದಿಗಾರರಿಗೆ ತಿಳಿಸಿದರು.

ಇನ್ನು ಉತ್ತರ ಕೊರಿಯಾ ಕ್ರಮವನ್ನು ದಕ್ಷಿಣ ಕೊರಿಯಾದ ಸೇನಾ ಜಂಟಿ ಮುಖ್ಯಸ್ಥರು (ಜೆಸಿಎಸ್) ಖಂಡನೆ ವ್ಯಕ್ತಪಡಿಸಿದ್ದಾರೆ. ಉತ್ತರ ಕೊರಿಯಾದ ಸತತ ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾವಣೆಗಳು ಕೊರಿಯನ್ ಪರ್ಯಾಯ ದ್ವೀಪ ಮತ್ತು ಅಂತಾರಾಷ್ಟ್ರೀಯ ಸಮುದಾಯದ ಶಾಂತಿ ಮತ್ತು ಸ್ಥಿರತೆಯನ್ನು ಹಾಳುಮಾಡುವ ಗಂಭೀರ ಪ್ರಚೋದನಕಾರಿ ಕೃತ್ಯಗಳಾಗಿವೆ. ಅಲ್ಲದೆ ಕ್ಷಿಪಣಿ ಉಡಾವಣೆಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿವೆ ಎಂದು ಜೆಸಿಎಸ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿಗಿನ ದಿನಗಳಲ್ಲಿ ದಕ್ಷಿಣ ಕೊರಿಯಾ ಹಾಗೂ ಜಪಾನ್ ಕರಾವಳಿ ತೀರಗಳಿಗೆ ಅಮೆರಿಕಾ ತನ್ನ ಸೇನಾ ಪರಿಕರಗಳನ್ನು ಸಾಗಿಸುವ ಕಾರ್ಯಕ್ಕೆ ಹೆಚ್ಚಿನ ವೇಗ ನೀಡಿದ್ದು, ಸಹಜವಾಗಿಯೇ ಇದಕ್ಕೆ ಉತ್ತರ ಕೊರಿಯಾ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೆ ದಕ್ಷಿಣ ಕೊರಿಯಾ ಕಡಲ ತಟದಲ್ಲಿ ಅಮೆರಿಕಾ ಹೆಚ್ಚು ಸಕ್ರಿಯವಾಗಿದ್ದು, ಮಿಲಿಟರಿ ಅಭ್ಯಾಸದಲ್ಲಿ ಕೂಡ ತೊಡಗಿಸಿಕೊಂಡಿದೆ.

andolanait

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago