BREAKING NEWS

ಎರಡು ಬ್ಯಾಲೆಸ್ಟಿಕ್ ಕ್ಷಿಪಣಿಗಳ ಪ್ರಯೋಗಿಸಿದ ಉತ್ತರ ಕೊರಿಯಾ

ವಾಷಿಂಗ್ಟನ್:  ಬರೊಬ್ಬರಿ ನಾಲ್ಕು ದಶಕಗಳ ಬಳಿಕ ದಕ್ಷಿಣ ಕೊರಿಯಾದ ಬಂದರಿಗೆ ಅಮೆರಿಕಾದ ಬ್ಯಾಲಿಸ್ಟಿಕ್ ಕ್ಷಿಪಣಿ ಜಲಾಂತರ್ಗಾಮಿ ನೌಕೆ ಆಗಮಿಸಿದ್ದಕ್ಕೆ ತಿರುಗೇಟು ಎಂಬಂತೆ ಬುಧವಾರ ಬೆಳಗ್ಗೆ ಉತ್ತರ ಕೊರಿಯಾವು ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿದೆ.

ಉತ್ತರ ಕೊರಿಯಾದ ಎರಡೂ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಜಪಾನ್‌ನ ವಿಶೇಷ ಆರ್ಥಿಕ ವಲಯದ ಹೊರಗೆ ಬಿದ್ದಿವೆ ಎಂದು ಜಪಾನ್ ರಕ್ಷಣಾ ಸಚಿವಾಲಯ ತಿಳಿಸಿದೆ.

ಮೊದಲ ಕ್ಷಿಪಣಿಯು ೫೦ ಕಿಮೀ ಎತ್ತರವನ್ನು ತಲುಪಿ ೫೫೦ ಕಿಮೀ ವ್ಯಾಪ್ತಿಯನ್ನು ಕ್ರಮಿಸಿದರೆ ಎರಡನೆಯ ಕ್ಷಿಪಣಿಯು ೫೦ ಕಿಮೀ ಎತ್ತರಕ್ಕೆ ಏರಿತು ಮತ್ತು ೬೦೦ ಕಿ.ಮೀ. ದೂರಕ್ಕೆ ಹಾರಿತು ಎಂದು ಜಪಾನಿನ ರಕ್ಷಣಾ ಸಚಿವ ಯಸುಕಾಜು ಹಮಡಾ ಸುದ್ದಿಗಾರರಿಗೆ ತಿಳಿಸಿದರು.

ಇನ್ನು ಉತ್ತರ ಕೊರಿಯಾ ಕ್ರಮವನ್ನು ದಕ್ಷಿಣ ಕೊರಿಯಾದ ಸೇನಾ ಜಂಟಿ ಮುಖ್ಯಸ್ಥರು (ಜೆಸಿಎಸ್) ಖಂಡನೆ ವ್ಯಕ್ತಪಡಿಸಿದ್ದಾರೆ. ಉತ್ತರ ಕೊರಿಯಾದ ಸತತ ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾವಣೆಗಳು ಕೊರಿಯನ್ ಪರ್ಯಾಯ ದ್ವೀಪ ಮತ್ತು ಅಂತಾರಾಷ್ಟ್ರೀಯ ಸಮುದಾಯದ ಶಾಂತಿ ಮತ್ತು ಸ್ಥಿರತೆಯನ್ನು ಹಾಳುಮಾಡುವ ಗಂಭೀರ ಪ್ರಚೋದನಕಾರಿ ಕೃತ್ಯಗಳಾಗಿವೆ. ಅಲ್ಲದೆ ಕ್ಷಿಪಣಿ ಉಡಾವಣೆಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿವೆ ಎಂದು ಜೆಸಿಎಸ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿಗಿನ ದಿನಗಳಲ್ಲಿ ದಕ್ಷಿಣ ಕೊರಿಯಾ ಹಾಗೂ ಜಪಾನ್ ಕರಾವಳಿ ತೀರಗಳಿಗೆ ಅಮೆರಿಕಾ ತನ್ನ ಸೇನಾ ಪರಿಕರಗಳನ್ನು ಸಾಗಿಸುವ ಕಾರ್ಯಕ್ಕೆ ಹೆಚ್ಚಿನ ವೇಗ ನೀಡಿದ್ದು, ಸಹಜವಾಗಿಯೇ ಇದಕ್ಕೆ ಉತ್ತರ ಕೊರಿಯಾ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೆ ದಕ್ಷಿಣ ಕೊರಿಯಾ ಕಡಲ ತಟದಲ್ಲಿ ಅಮೆರಿಕಾ ಹೆಚ್ಚು ಸಕ್ರಿಯವಾಗಿದ್ದು, ಮಿಲಿಟರಿ ಅಭ್ಯಾಸದಲ್ಲಿ ಕೂಡ ತೊಡಗಿಸಿಕೊಂಡಿದೆ.

andolanait

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

2 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

6 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

22 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

22 hours ago