BREAKING NEWS

‘ಒಂದೇ ಒಂದು ಶೌಚಾಲಯವೂ ಸಿಗಲಿಲ್ಲ’: ರಾಷ್ಟ್ರಪತಿ ಮುರ್ಮುಗೆ ಕನ್ನಡದಲ್ಲಿ ಪತ್ರ ಬರೆದ ಕರ್ನಾಟಕದ ಮಹಿಳೆ!

ಚಿಕ್ಕಮಗಳೂರು: ಜಿಲ್ಲೆಯ ಯಾತ್ರಾ ಕೇಂದ್ರದಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದ ಕಾರಣ ಸಾರ್ವಜನಿಕವಾಗಿ ಪ್ರಕೃತಿಯ ಕರೆಗೆ ಹಾಜರಾಗುವುದನ್ನು ಬಿಟ್ಟು ಬೇರೆ ದಾರಿಯಿರಲಿಲ್ಲ ಎಂಬ ಬಗ್ಗೆ ಕರ್ನಾಟಕ ಮಹಿಳೆಯೊಬ್ಬರು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕನ್ನಡದಲ್ಲಿಯೇ ಪತ್ರ ಬರೆದಿರುವ ಜಡೆಮ್ಮ ಎಂಬ ಭಕ್ತೆ ತನಗಾದ ಸಂಕಷ್ಟವನ್ನು ಸವಿಸ್ತಾರವಾಗಿ ವಿವರಿಸಿದ್ದಾರೆ.

ಲಕ್ಷಾಂತರ ಜನರು ಭೇಟಿ ನೀಡುವ ಯಾತ್ರಾ ಕೇಂದ್ರಗಳಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ಮಾಣವನ್ನು ಖಚಿತಪಡಿಸಿಕೊಳ್ಳಬೇಕು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮಂತಹ ಮಹಿಳೆಗೆ ಸ್ಫೂರ್ತಿ ಮತ್ತು ಆತ್ಮವಿಶ್ವಾಸದ ಸಂಕೇತ. ನನ್ನಂತಹ ಸಾಮಾನ್ಯ ಮಹಿಳೆಯರ ನೋವನ್ನು ತಿಳಿಸುವುದು ಪತ್ರದ ಮುಖ್ಯ ಉದ್ದೇಶ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

‘ಕೆಲವು ದಿನಗಳ ಹಿಂದೆ ನಾನು ಬಾಬಾಬುಡನಗಿರಿ ದತ್ತ ಪೀಠ, ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿ ಸೇರಿದಂತೆ ಎಲ್ಲಾ ಹಿಂದೂ ಯಾತ್ರಾ ಕೇಂದ್ರಗಳಿಗೆ ಭೇಟಿ ನೀಡಿದ್ದೆ. ಬಾಬಾಬುಡನ್‌ಗಿರಿಯಲ್ಲಿ, ನಾನು ಪ್ರಕೃತಿಯ ಕರೆಗೆ ಹೋಗಬೇಕಾಯಿತು. ಅಲ್ಲಿ ನನಗೆ ಯಾವುದೇ ಶೌಚಾಲಯ ಕಾಣಿಸಲಿಲ್ಲ. ಶೌಚಾಲಯಕ್ಕಾಗಿ ಎಷ್ಟೇ ಹುಡುಕಾಡಿದರೂ ಪ್ರಯೋಜನವಾಗಲಿಲ್ಲ’ ಎಂದಿದ್ದಾರೆ.

‘ನಂತರ ಸೀತಾಳಯ್ಯನಗಿರಿ ಹತ್ತಿ ಸಾರ್ವಜನಿಕ ಶೌಚಾಲಯ ಹುಡುಕಿದೆ. ಕ್ಷಣಕ್ಷಣಕ್ಕೂ ತಡೆಯಲಾರದ ಸ್ಥಿತಿ ನಿರ್ಮಾಣವಾಗುತ್ತಿತ್ತು. ಸಹಿಸಲು ಅಸಾಧ್ಯವಾಯಿತು ಮತ್ತು ಅವಮಾನ ಸಹಿಸಿಕೊಂಡು ಸಾರ್ವಜನಿಕ ಸ್ಥಳದಲ್ಲೇ ಮೂತ್ರ ವಿಸರ್ಜನೆ ಮಾಡಿದೆ’ ಎಂದಿದ್ದಾರೆ.

‘ಪ್ರತಿದಿನವೂ ಜನರು ತಮ್ಮ ಧರ್ಮ ಮತ್ತು ದೇವರಿಗಾಗಿ ಹೋರಾಡುತ್ತಾರೆ. ಆದರೆ, ಶೌಚಾಲಯಗಳನ್ನು ನಿರ್ಮಿಸುವ ಬಗ್ಗೆ ಅವರ ನಿರ್ಲಕ್ಷ್ಯ ದುರದೃಷ್ಟಕರ. ಪ್ರಕೃತಿಯ ಕರೆಗೆ ನಾವು ಯಾವ ಧರ್ಮದವರು ಎಂಬುದನ್ನು ಮರೆತು ಅದಕ್ಕೆ ಒತ್ತು ನೀಡುತ್ತೇವೆ. ಜಗತ್ತಿನಲ್ಲಿ ಎಲ್ಲಾ ಧರ್ಮದ ಜನರು ಬಳಸುವ ಯಾವುದೇ ಸ್ಥಳವಿದೆ ಎಂದಾದರೆ ಅದು ಶೌಚಾಲಯವಾಗಿದೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ನೀವು ಕೂಡ ನನ್ನಂತೆ ಹೆಣ್ಣೇ. ಆದರೆ, ನೀವು ಅಧಿಕಾರದಲ್ಲಿರುವುದರಿಂದ ಮತ್ತು ನಿಮ್ಮ ಸೇವೆ ಮಾಡಲು ಜನರಿರುವುದರಿಂದ ನಾನು ಎದುರಿಸುವ ಸಮಸ್ಯೆಗಳನ್ನು ನೀವು ಎದುರಿಸುವುದಿಲ್ಲ. ಆದರೆ, ಶೌಚಾಲಯ ಇಲ್ಲದಿರುವುದು ನನ್ನಂತಹ ಮಹಿಳೆಯರ ಘನತೆಗೆ ಕುಂದು ತಂದಿದೆ. ಪ್ರಕೃತಿಯ ಕರೆಗೆ ಹಾಜರಾಗುವ ಬಗ್ಗೆ ಸಾಮಾನ್ಯ ಮಹಿಳೆಯ ಒತ್ತಡವನ್ನು ನೀವು ಅರ್ಥಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ.

ಮಹಿಳೆಯರು ಎದುರಿಸುತ್ತಿರುವ ಕಷ್ಟಗಳು ಮಹಿಳೆಯರಿಗಷ್ಟೇ ತಿಳಿದಿದೆ. ಲಕ್ಷಾಂತರ ಜನರು ಭೇಟಿ ನೀಡುವ ಯಾತ್ರಾ ಕೇಂದ್ರದಲ್ಲಿ ಸಾರ್ವಜನಿಕ ಶೌಚಾಲಯ ಇಲ್ಲದಿರುವುದು ಸಂವಿಧಾನದ 19 ಮತ್ತು 21ನೇ ವಿಧಿಯ ಉಲ್ಲಂಘನೆಯಾಗಿದೆ. ನಾವು ಮಂಗಳ ಗ್ರಹ ತಲುಪಿದ್ದೇವೆ. ಆದರೆ, ಈ ಯಾತ್ರಾ ಕೇಂದ್ರಗಳಲ್ಲಿ ಶೌಚಾಲಯ ನಿರ್ಮಿಸಲು ಸಾಧ್ಯವಾಗಿಲ್ಲ ಎಂದು ದೂರಿದ್ದಾರೆ.

‘ಭಾರತವು ವಿಶ್ವದಲ್ಲಿ ಮಧುಮೇಹದ ರಾಜಧಾನಿಯಾಗಿದೆ. ಅವರು ಸಾರ್ವಜನಿಕ ಶೌಚಾಲಯಗಳ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ನೀವು ಇಲ್ಲಿ ಶೌಚಾಲಯವನ್ನು ನಿರ್ಮಿಸಿದರೆ, ಕರ್ನಾಟಕದ ಜನರು ಮರೆಯುವುದಿಲ್ಲ’ ಎಂದಿದ್ದಾರೆ.

andolanait

Recent Posts

ಸಿಎಂಗೆ ವಿದ್ಯಾರ್ಥಿಗಳು ಪತ್ರ ಬರೆದ ಪ್ರಕರಣ: ಪಚ್ಚೆದೊಡ್ಡಿ ಸರ್ಕಾರಿ ಶಾಲೆಗೆ ಬಿಇಒ ಭೇಟಿ

ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…

2 hours ago

ಕೋಟೆ ಪುರಸಭೆ ಪೌರಕಾರ್ಮಿಕರು, ನೌಕರರಿಗೆ ೫ ತಿಂಗಳಿಂದ ಸಂಬಳವಿಲ್ಲ

ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…

2 hours ago

ಕೈಬೀಸಿ ಕರೆಯುತ್ತಿದೆ ‘ಪ್ರಸಾರಾಂಗ ಪುಸ್ತಕೋತ್ಸವ’

ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…

2 hours ago

ನಗರಪಾಲಿಕೆ ಆರ್ಥಿಕ ಬರ ನೀಗಿಸಿದ ತೆರಿಗೆ ಸಂಗ್ರಹ

ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…

2 hours ago

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

13 hours ago