BREAKING NEWS

‘ಒಂದೇ ಒಂದು ಶೌಚಾಲಯವೂ ಸಿಗಲಿಲ್ಲ’: ರಾಷ್ಟ್ರಪತಿ ಮುರ್ಮುಗೆ ಕನ್ನಡದಲ್ಲಿ ಪತ್ರ ಬರೆದ ಕರ್ನಾಟಕದ ಮಹಿಳೆ!

ಚಿಕ್ಕಮಗಳೂರು: ಜಿಲ್ಲೆಯ ಯಾತ್ರಾ ಕೇಂದ್ರದಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದ ಕಾರಣ ಸಾರ್ವಜನಿಕವಾಗಿ ಪ್ರಕೃತಿಯ ಕರೆಗೆ ಹಾಜರಾಗುವುದನ್ನು ಬಿಟ್ಟು ಬೇರೆ ದಾರಿಯಿರಲಿಲ್ಲ ಎಂಬ ಬಗ್ಗೆ ಕರ್ನಾಟಕ ಮಹಿಳೆಯೊಬ್ಬರು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕನ್ನಡದಲ್ಲಿಯೇ ಪತ್ರ ಬರೆದಿರುವ ಜಡೆಮ್ಮ ಎಂಬ ಭಕ್ತೆ ತನಗಾದ ಸಂಕಷ್ಟವನ್ನು ಸವಿಸ್ತಾರವಾಗಿ ವಿವರಿಸಿದ್ದಾರೆ.

ಲಕ್ಷಾಂತರ ಜನರು ಭೇಟಿ ನೀಡುವ ಯಾತ್ರಾ ಕೇಂದ್ರಗಳಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ಮಾಣವನ್ನು ಖಚಿತಪಡಿಸಿಕೊಳ್ಳಬೇಕು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮಂತಹ ಮಹಿಳೆಗೆ ಸ್ಫೂರ್ತಿ ಮತ್ತು ಆತ್ಮವಿಶ್ವಾಸದ ಸಂಕೇತ. ನನ್ನಂತಹ ಸಾಮಾನ್ಯ ಮಹಿಳೆಯರ ನೋವನ್ನು ತಿಳಿಸುವುದು ಪತ್ರದ ಮುಖ್ಯ ಉದ್ದೇಶ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

‘ಕೆಲವು ದಿನಗಳ ಹಿಂದೆ ನಾನು ಬಾಬಾಬುಡನಗಿರಿ ದತ್ತ ಪೀಠ, ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿ ಸೇರಿದಂತೆ ಎಲ್ಲಾ ಹಿಂದೂ ಯಾತ್ರಾ ಕೇಂದ್ರಗಳಿಗೆ ಭೇಟಿ ನೀಡಿದ್ದೆ. ಬಾಬಾಬುಡನ್‌ಗಿರಿಯಲ್ಲಿ, ನಾನು ಪ್ರಕೃತಿಯ ಕರೆಗೆ ಹೋಗಬೇಕಾಯಿತು. ಅಲ್ಲಿ ನನಗೆ ಯಾವುದೇ ಶೌಚಾಲಯ ಕಾಣಿಸಲಿಲ್ಲ. ಶೌಚಾಲಯಕ್ಕಾಗಿ ಎಷ್ಟೇ ಹುಡುಕಾಡಿದರೂ ಪ್ರಯೋಜನವಾಗಲಿಲ್ಲ’ ಎಂದಿದ್ದಾರೆ.

‘ನಂತರ ಸೀತಾಳಯ್ಯನಗಿರಿ ಹತ್ತಿ ಸಾರ್ವಜನಿಕ ಶೌಚಾಲಯ ಹುಡುಕಿದೆ. ಕ್ಷಣಕ್ಷಣಕ್ಕೂ ತಡೆಯಲಾರದ ಸ್ಥಿತಿ ನಿರ್ಮಾಣವಾಗುತ್ತಿತ್ತು. ಸಹಿಸಲು ಅಸಾಧ್ಯವಾಯಿತು ಮತ್ತು ಅವಮಾನ ಸಹಿಸಿಕೊಂಡು ಸಾರ್ವಜನಿಕ ಸ್ಥಳದಲ್ಲೇ ಮೂತ್ರ ವಿಸರ್ಜನೆ ಮಾಡಿದೆ’ ಎಂದಿದ್ದಾರೆ.

‘ಪ್ರತಿದಿನವೂ ಜನರು ತಮ್ಮ ಧರ್ಮ ಮತ್ತು ದೇವರಿಗಾಗಿ ಹೋರಾಡುತ್ತಾರೆ. ಆದರೆ, ಶೌಚಾಲಯಗಳನ್ನು ನಿರ್ಮಿಸುವ ಬಗ್ಗೆ ಅವರ ನಿರ್ಲಕ್ಷ್ಯ ದುರದೃಷ್ಟಕರ. ಪ್ರಕೃತಿಯ ಕರೆಗೆ ನಾವು ಯಾವ ಧರ್ಮದವರು ಎಂಬುದನ್ನು ಮರೆತು ಅದಕ್ಕೆ ಒತ್ತು ನೀಡುತ್ತೇವೆ. ಜಗತ್ತಿನಲ್ಲಿ ಎಲ್ಲಾ ಧರ್ಮದ ಜನರು ಬಳಸುವ ಯಾವುದೇ ಸ್ಥಳವಿದೆ ಎಂದಾದರೆ ಅದು ಶೌಚಾಲಯವಾಗಿದೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ನೀವು ಕೂಡ ನನ್ನಂತೆ ಹೆಣ್ಣೇ. ಆದರೆ, ನೀವು ಅಧಿಕಾರದಲ್ಲಿರುವುದರಿಂದ ಮತ್ತು ನಿಮ್ಮ ಸೇವೆ ಮಾಡಲು ಜನರಿರುವುದರಿಂದ ನಾನು ಎದುರಿಸುವ ಸಮಸ್ಯೆಗಳನ್ನು ನೀವು ಎದುರಿಸುವುದಿಲ್ಲ. ಆದರೆ, ಶೌಚಾಲಯ ಇಲ್ಲದಿರುವುದು ನನ್ನಂತಹ ಮಹಿಳೆಯರ ಘನತೆಗೆ ಕುಂದು ತಂದಿದೆ. ಪ್ರಕೃತಿಯ ಕರೆಗೆ ಹಾಜರಾಗುವ ಬಗ್ಗೆ ಸಾಮಾನ್ಯ ಮಹಿಳೆಯ ಒತ್ತಡವನ್ನು ನೀವು ಅರ್ಥಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ.

ಮಹಿಳೆಯರು ಎದುರಿಸುತ್ತಿರುವ ಕಷ್ಟಗಳು ಮಹಿಳೆಯರಿಗಷ್ಟೇ ತಿಳಿದಿದೆ. ಲಕ್ಷಾಂತರ ಜನರು ಭೇಟಿ ನೀಡುವ ಯಾತ್ರಾ ಕೇಂದ್ರದಲ್ಲಿ ಸಾರ್ವಜನಿಕ ಶೌಚಾಲಯ ಇಲ್ಲದಿರುವುದು ಸಂವಿಧಾನದ 19 ಮತ್ತು 21ನೇ ವಿಧಿಯ ಉಲ್ಲಂಘನೆಯಾಗಿದೆ. ನಾವು ಮಂಗಳ ಗ್ರಹ ತಲುಪಿದ್ದೇವೆ. ಆದರೆ, ಈ ಯಾತ್ರಾ ಕೇಂದ್ರಗಳಲ್ಲಿ ಶೌಚಾಲಯ ನಿರ್ಮಿಸಲು ಸಾಧ್ಯವಾಗಿಲ್ಲ ಎಂದು ದೂರಿದ್ದಾರೆ.

‘ಭಾರತವು ವಿಶ್ವದಲ್ಲಿ ಮಧುಮೇಹದ ರಾಜಧಾನಿಯಾಗಿದೆ. ಅವರು ಸಾರ್ವಜನಿಕ ಶೌಚಾಲಯಗಳ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ನೀವು ಇಲ್ಲಿ ಶೌಚಾಲಯವನ್ನು ನಿರ್ಮಿಸಿದರೆ, ಕರ್ನಾಟಕದ ಜನರು ಮರೆಯುವುದಿಲ್ಲ’ ಎಂದಿದ್ದಾರೆ.

andolanait

Recent Posts

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

2 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

2 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

2 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

3 hours ago

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

6 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

6 hours ago