ಹೈದರಾಬಾದ್: ತೆಲಂಗಾಣದ ಭಾರತ ರಾಷ್ಟ್ರ ಸಮಿತಿ ಸರ್ಕಾರ ಹಾಗೂ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಇಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ತೆಲಂಗಾಣಕ್ಕೆ ಉಪಯೋಗವಾಗುವ ಹಲವು ಯೋಜನೆಗಳನ್ನು ಜಾರಿ ಮಾಡಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದೊಂದಿಗೆ ಸಹಕರಿಸುತ್ತಿಲ್ಲ. ತೆಲಂಗಾಣದ ಸರ್ಕಾರ ಪರಿವಾರವಾದ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಪ್ರಧಾನಿ ಆರೋಪಿಸಿದರು.
‘ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರದ ಸಹಕಾರ ಸಿಗದಿರುವುದರಿಂದ ನಾನು ನೊಂದಿದ್ದೇನೆ. ಇದು ತೆಲಂಗಾಣದ ಜನರ ಕನಸಿಗೆ ಅಡ್ಡಿಯುಂಟು ಮಾಡುತ್ತಿದೆ. ತೆಲಂಗಾಣದ ಜನರಿಗೆ ತಲುಪಿಸಲು ಯೋಜನೆ ಮಾಡಿರುವಂಥ ಯೋಜನೆಗಳಿಗೆ ತಡೆಯುಂಟು ಮಾಡಬೇಡಿ ಎಂದು ನಾನು ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ‘ ಎಂದು ಮೋದಿ ಹೇಳಿದ್ದಾರೆ.
ಮುಖ್ಯಮಂತ್ರಿ ಕೆ.ಸಿ.ಆರ್ ಅವರ ಹೆಸರೆತ್ತದೆ ವಾಗ್ದಾಳಿ ನಡೆಸಿದ ಅವರು, ಕೆಲವರು ಪರಿವಾರವಾದವನ್ನು ಪೋಷಿಸುತ್ತಿದ್ದು, ತೆಲಂಗಾಣದ ಜನರಿಗೆ ಸಿಗಬೇಕಾದ ಪ್ರಯೋಜನವನ್ನು ಕಸಿದುಕೊಳ್ಳುತ್ತಿದ್ದಾರೆ ಎಂದು ಹರಿಹಾಯ್ದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…