BREAKING NEWS

ಹಿರಿಯರಿಗೆ ಗೌರವ ಕೊಡದಿರುವುದು ಬಿಜೆಪಿಗೆ ಮುಳುವಾಗುತ್ತೆ: ಜಗದೀಶ ಶೆಟ್ಟರ್

ಹುಬ್ಬಳ್ಳಿ: ಕೆಲವರು ತಮ್ಮ ಹಿತಕ್ಕಾಗಿ ಬಿಜೆಪಿಯನ್ನು ಬಲಿ‌ ಕೊಡುತ್ತಿದ್ದಾರೆ. ಹಿರಿಯರಿಗೆ ಗೌರವ ಕೊಡದೆ ಇರುವುದು ಬಿಜೆಪಿಗೆ ಮುಳುವಾಗುತ್ತೆ ಎಂದು ಶಾಸಕ ಜಗದೀಶ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದರು.

ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ತೆರಳುವ ಮುನ್ನ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು‌.

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ ಅವರಿಗೆ ಇಲ್ಲಿನ ಬಿಜೆಪಿಯ ತಳಮಟ್ಟದ ಪರಿಸ್ಥಿತಿ ಬಗ್ಗೆ ಏನೂ ಗೊತ್ತಿಲ್ಲ. ರಾಜ್ಯ ಬಿಜೆಪಿ ಉಸ್ತುವಾರಿಗಳು ಹಾಗೂ ಇಲ್ಲಿನ ನಾಯಕರು ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ಬೇಡ ಅಂತಾ ತೀರ್ಮಾನ ಮಾಡಿದಂತಿದೆ ಎಂದು ಹೇಳಿದರು.

ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ಬಳಿಕ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಕೊಡುತ್ತೇನೆ. ವಾಪಸ್ ಬಂದು ಹಿತೈಷಿಗಳ ಜೊತೆ ಚರ್ಚಿಸಿ ಮುಂದಿನ ಹೆಜ್ಜೆ ಬಗ್ಗೆ ನಿರ್ಧರಿಸುತ್ತೇನೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದರು.

ಬಿಜೆಪಿ ನಾಯಕರಿಂದ ಮತ್ತೆ ಯಾವುದೇ ಕರೆ ಬಂದಿಲ್ಲ, ಕೊನೆಯ ವಿಸ್ಮಯ ನಡೆಯಲ್ಲ. ಒಂದು ಹೆಜ್ಜೆ ಮುಂದೆ ಇಟ್ಟಿದ್ದೀನಿ, ಹಿಂದೆ ಸರಿಯಲ್ಲ. ಕಾಂಗ್ರೆಸ್ ಸೇರ್ಪಡೆ ವಿಚಾರ ಸೇರಿದಂತೆ ಎಲ್ಲಾ ಆಯ್ಕೆಗಳು ತೆರೆದಿವೆ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಹಿತೈಷಿಗಳ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇನೆ. ಕಾಂಗ್ರೆಸ್ ನವರು ತಮ್ಮ ಪ್ರತಿನಿಧಿ ಕಳಿಸಿದ್ದಾರೆ ಎಂದರು.

ನಾನು ಎಲ್ಲಾ ಜಾತಿ, ಧರ್ಮದ ಜನರನ್ನು ಸಮಾನವಾಗಿ ಕಂಡಿದ್ದೇನೆ. ಬಿಜೆಪಿ ಮುಖಂಡರಿಗೆ ಹಿರಿಯರ ಜೊತೆ ಮಾತಾಡುವ ಸೌಜನ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

andolanait

Recent Posts

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

16 mins ago

ಜನವರಿ 28 ಮತ್ತು 29ರಂದು ‘ತಟ್ಟೆ ಇಡ್ಲಿ ರಾದ್ಧಾಂತ’ ಹಾಸ್ಯ ನಾಟಕ ಪ್ರದರ್ಶನ

ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…

34 mins ago

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

59 mins ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

2 hours ago

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

3 hours ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

6 hours ago