BREAKING NEWS

ಅಧಿಕಾರಕ್ಕೆ ಬಂದು ಎರಡು ವಾರ ಆಗಿಲ್ಲ ಕಾಂಗ್ರೆಸ್ ನವರು ಆಕಾಶದ ಮೇಲೆ ನಡೆಯುತ್ತಿದ್ದಾರೆ : ಅಶ್ವತ್ಥ ನಾರಾಯಣ ವಾಗ್ದಾಳಿ

ಬೆಂಗಳೂರು : ಅಧಿಕಾರಕ್ಕೆ ಬಂದು ಎರಡು ವಾರ ಆಗಿಲ್ಲ, ಕಾಂಗ್ರೆಸ್ ನವರು ಆಕಾಶದ ಮೇಲೆ ನಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತಕ್ಕೆ ಬಂದ ಪ್ರಥಮ ದಿನಗಳಲ್ಲಿ ಬೆಲೆ ಏರಿಕೆ ಮಾಡುತ್ತಿದ್ದಾರೆ. ಐದು ಗ್ಯಾರಂಟಿ ಕೊಡುವ ಭರವಸೆ ನೀಡಿ ಮಾತು ತಪ್ಪಿದ್ದಾರೆ. ಗ್ಯಾರಂಟಿಯಲ್ಲಿ ಫ್ರೀ ಕೊಡುತ್ತೇವೆ ಎಂದು ಹೇಳಿದವರು ಅದನ್ನು ಈಡೇರಿಸಿಲ್ಲ ಎಂದರು.

ಉಚಿತ ವಿದ್ಯುತ್ ಎಂದು ಹೇಳಿ ಇದೀಗ ವಿದ್ಯುತ್ ದರ ಏರಿಕೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಚೊಚ್ಚಲ ಕೊಡುಗೆ ಬೆಲೆ ಏರಿಕೆಯಾಗಿದೆ. ವಿದ್ಯುತ್ ಉತ್ಪಾದನೆ ವೆಚ್ಚ ಕಡಿಮೆ ಆದರೂ ವಿದ್ಯುತ್ ದರ ಏರಿಕೆ ಆಗುತ್ತಿದೆ. ಇದಕ್ಕೆ ಡಿಕೆಶಿ‌ ಕೊಡುಗೆ ಇದೆ. ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಇಂಧನ ಸಚಿವರಾಗಿದ್ದ ಡಿಕೆಶಿ ಸೋಲಾರ್ ಯೋಜನೆಯನ್ನು ಬೇಕಾದವರಿಗೆ ಹರಾಜು ಮಾಡಿರುವ ಪರಿಣಾಮ ಇದು. ಜನರ ರಕ್ತ ಹೀರುವುದೇ ಕಾಂಗ್ರೆಸ್ ‌ಕೊಡುಗೆ ಆಗಿದೆ ಎಂದು ಟೀಕಿಸಿದರು.

ಇನ್ನು ಚಕ್ರವರ್ತಿ ಸೂಲಿಬೆಲೆಯನ್ನು ಜೈಲಿಗೆ ಹಾಕುವ ಎಚ್ಚರಿಕೆ ನೀಡುವ ಸಚಿವ ಎಂಬಿ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ,‌ ಜೈಲಿಗೆ ಹಾಕುತ್ತೇನೆ ಎಂದು ಹೇಳಲು ನೀವು ಜಡ್ಜಾ? ಇದೆಲ್ಲಾ ಕರ್ನಾಟಕದಲ್ಲಿ ನಡೆಯಲ್ಲ, ನಡವಳಿಕೆಯಲ್ಲಿ ಸುಧಾರಣೆ ತರಬೇಕು. ಜನ ಪರವಾಗಿ ಆಡಳಿತ ಮಾಡಿದರೆ ಸಹಕಾರ ಕೊಡುತ್ತೇವೆ. ದ್ವೇಷದ ರಾಜಕಾರಣ ಮಾಡಬೇಡಿ ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವಾರ ಆಗಿಲ್ಲ, ಆಕಾಶದ ಮೇಲೆ ನಡೆಯುತ್ತೀರಿ,ಭೂಮಿ ಮೇಲೆ ‌ನಡೆಯಿರಿ ಎಂದು ಅಶ್ವತ್ಥ ನಾರಾಯಣ ಸಲಹೆ ನೀಡಿದರು.
ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಮಾತನಾಡಿ, ಗ್ಯಾರಂಟಿಗಳ‌ ಯೂಟರ್ನ್ ಹೊಡೆಯುತ್ತಿದೆ ಸರ್ಕಾರ ಎಂದು‌ ಕಿಡಿಕಾರಿದರು. ಸಾವಿರ ಸುಳ್ಳು ಹೇಳಿ ಸರ್ಕಾರ ತಂದಿದ್ದಾರೆ. ಅಧಿಕಾರಕ್ಕೆ ಬಂದ ಬಳಿಕ ಇದೀಗ ಉತ್ತರ ಕೊಡಬೇಕಾಗಿದೆ. ಇನ್ನು ಮುಂದೆ ಗ್ಯಾರಂಟಿ ಅಂದರೆ ಸುಳ್ಳು ಎಂಬಂತಾಗಿದೆ ಎಂದು ಕಿಡಿಕಾರಿದರು.

ಪರಿಷತ್ ಸದಸ್ಯ ಕೇಶವ ಪ್ರಸಾದ್ ಮಾತನಾಡಿ, ‌ಉಚಿತ ಎಂದು ಘೋಷಣೆ ಮಾಡಿದ್ದರು. ವೇದಿಕೆ ಮೇಲೆ ಇದ್ದ ಎಲ್ಲರಿಗೂ ಕರೆಂಟ್ ಉಚಿತ ಎಂದಿದ್ದರು. ಮೊದಲ ಕ್ಯಾಬಿನೆಟ್ ನಲ್ಲಿ ಈಡೇರಿಸುವ ಭರವಸೆ ಕೊಟ್ಟಿದ್ದರು. ಆದರೆ ನೂರೆಂಟು ಷರತ್ತುಗಳನ್ನು ಹಾಕಿದ್ದಾರೆ. ಇವಾಗ ಗೊಂದಲಮಯ ವಾತಾವರಣ ಸೃಷ್ಟಿ ಮಾಡಿದ್ದಾರೆ.
ಮಹಿಳೆಯರಿಗೆ ಎರಡು ಸಾವಿರ ರೂಪಾಯಿ ಕೊಡುವ ಮೂಲಕ ಮನೆಯನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ನಿರುದ್ಯೋಗಿಗಳಿಗೆ ಮೂರು ಸಾವಿರ ಕೊಡುತ್ತೇವೆ ಎಂದವರು ಇವಾಗ 2022-23 ಅವಧಿಗೆ ಎಂದು ಷರತ್ತು ಹಾಕಿದ್ದಾರೆ ಎಂದು ಕಿಡಿಕಾರಿದರು.

lokesh

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

9 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

10 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

11 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

12 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

15 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

15 hours ago