BREAKING NEWS

ಯತ್ನಾಳ್‌ ಮಾಲಿಕತ್ವದ ಸಕ್ಕರೆ ಕಾರ್ಖಾನೆ ಮುಚ್ಚಲು ನೋಟಿಸ್‌ ಜಾರಿ!

ಬೆಂಗಳೂರು : ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌  ಒಡೆತನದ ಸಕ್ಕರೆ ಕಾರ್ಕಾನೆ ಮುಚ್ಚುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್‌ ಜಾರಿ ಮಾಡಿದೆ.

ಕಲಬುರಗಿಯಲ್ಲಿರುವ ಸಿದ್ದಶ್ರೀ ಸೌಹಾರ್ದ ಸಕ್ಕರೆ ಕಾರ್ಖಾನೆ,  ಒಂದು ವರ್ಷದಿಂದಲೂ ಪರಿಸರ ಮಾಲಿನ್ಯ ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ಕಂಡು ಬಂದಿದ್ದು,ಹೀಗಾಗಿ ತಮ್ಮ ಕಾರ್ಖಾನೆಯನ್ನು ಮುಚ್ಚುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಅಷ್ಟೇ ಅಲ್ಲದೇ ಈ ಕಾರ್ಖಾನೆಯ ನೊಂದಣಿಗೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಕೆಎಸ್‌ಪಿಸಿಬಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

2020ರಲ್ಲಿ ಕಾರ್ಖಾನೆ ಪ್ರಾರಂಭಕ್ಕೂ ಮೊದಲೆ ಅನೇಕ ಶರತ್ತುಗಳನ್ನು ವಿಧಿಸಲಾಗಿತ್ತು. ಆದರೆ ಇದೀಗ ಮಂಡಳಿ ಪ್ರದೇಶಿಕ ಅಧಿಕಾರಗಳು ಪರಿಶೀಲನೆಗೆ ತೆರಳಿದ್ದ ಸಂದರ್ಭದಲ್ಲಿ ಯಾವುದೇ ಷರತ್ತುಗಳನ್ನು ಪಾಲಿಸದಿರುವುದು ಕಂಡು ಬಂದಿದೆ. ಯಾವುದೇ ಅನುಮತಿ ಪಡೆಯದೇ ಡಿಸ್ಟಿಲರಿ ಘಟಕವನ್ನು ಸ್ಥಾಪಿಸಿರುವುದು  ಕಂಡು ಬಂದಿದೆ.

ಇವೆಲ್ಲಾ ಕಾರಣದಿಂದ ಶಾಸಕ ಯತ್ನಾಳ್‌ ಅವರ ಸಕ್ಕರೆ ಕಾರ್ಖಾನೆ ಮುಚ್ಚುವಂತೆ ನೋಟಿಸ್‌ ಜಾರಿ ಮಾಡಲಾಗಿದೆ.

 

andolanait

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

7 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

7 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

8 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

8 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

9 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

9 hours ago