ಬೆಂಗಳೂರು : ಕರ್ನಾಟಕ ಶಿಕ್ಷಣ ಕಾಯಿದೆ-1983 ಸೆಕ್ಷನ್-30 ಮತ್ತು 31ರಂತೆ ನೋಂದಣಿ ಅನುಮತಿಯನ್ನು ಪಡೆಯದ ಶಾಲೆಯನ್ನು ನಡೆಸುತ್ತಿದ್ದಲ್ಲಿ ಅಂತಹ ಶಾಲೆಗಳನ್ನು ಆ. 14 ರೊಳಗಾಗಿ ಮುಚ್ಚಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ.
ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಿಗೆ ಪತ್ರ ಬರೆದಿರುವ ಆಯುಕ್ತರು, ʼʼಅನಧಿಕೃತ ಶಾಲೆಗಳನ್ನು ನಿಯಮಾನುಸಾರ ಮುಚ್ಚಿಸಿ ಪತ್ರಿಕಾ ಪುಕಟನೆಯನ್ನು ನೀಡಿ ಅನಧಿಕೃತ ಶಾಲೆ ಎಂಬುದಾಗಿ ಸಾರ್ವಜನಿಕವಾಗಿ/ಪೋಷಕರಿಗೆ ತಿಳಿಯುವ ರೀತಿಯಲ್ಲಿ ಕಚೇರಿಯ ಸೂಚನಾ ಫಲಕದಲ್ಲಿ ಪಕಟಿಸುವಂತೆ ಸೂಚಿಸಿದ್ದಾರೆ.
ʼಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ನೋಂದಣಿ ಪಡೆಯದ ನಡೆಯುತ್ತಿರುವ ಶಾಲೆಗಳು ಯಾವುದು ಇರುವುದಿಲ್ಲವೆಂದು ದೃಢೀಕರಣ ನೀಡತಕ್ಕದ್ದು. ತದನಂತರ ಸಾರ್ವಜನಿಕರಿಂದ ನಿಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ನೋಂದಣಿ ಪಡೆಯದ ಅನಧಿಕೃತವಾಗಿ ಶಾಲೆಗಳು ನಡೆಯುತ್ತಿವ ಎಂದು ದೂರು ಬಂದಲ್ಲಿ ನಿಮ್ಮನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದುʼ ಎಂದು ಎಚ್ಚರಿಕೆ ನೀಡಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…