BREAKING NEWS

ನ.20ರೊಳಗೆ ಕಬ್ಬಿಗೆ ಹೆಚ್ಚುವರಿ ಬೆಂಬಲ ಘೋಷಣೆ

ಸಕ್ಕರೆ ಸಚಿವರ ಜತೆಗಿನ ಸಭೆಯ ಬಳಿಕ ನಿರ್ಧಾರ, ಕಬ್ಬು ಬೆಳೆಗಾರರ  ಅಹೋರಾತ್ರಿ ಧರಣಿ ವಾಪಸ್
ಬೆಂಗಳೂರು : 
ರಾಜ್ಯ ಸರ್ಕಾರದ ಕಬ್ಬು ಖರೀದಿ ನಿಯಂತ್ರಣ ಮಂಡಳಿ ಹಾಗೂ ರಾಜ್ಯದ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ತೀರ್ಮಾನಮಾಡಿದ್ದಾರೆ.
ಎಫ್ಆರ್‌ಪಿ ಹೆಚ್ಚುವರಿ ದರ ನಿಗದಿಗೆ ಸಕ್ಕರೆ ಆಯುಕ್ತರ ಅಧ್ಯಕ್ಷತೆಯಲ್ಲಿ ತಾಂತ್ರಿಕ ಸಮಿತಿ ಐದು ದಿನದಲ್ಲಿ ವರದಿ ಕೊಡಲು ಸೂಚನೆ, 20ರ ಒಳಗಾಗಿ ವರದಿ ಆಧರಿಸಿ ಮುಖ್ಯಮಂತ್ರಿಗಳು ಹೆಚ್ಚುವರಿ ಬೆಲೆ ಘೋಷಣೆ ಮಾಡಲಿದ್ದಾರೆ ಎಂದು ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೆನ ಕೊಪ್ಪ ಸಬೆ ನಂತರ ತಿಳಿಸಿದರು

ಕಳೆದ 11 ದಿನದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಹೂ ರಾತ್ರಿ ಧರಣಿ ಚಳುವಳಿ ನಡೆಸುತ್ತಿರುವ ರೈತರ ಜೊತೆ ಚರ್ಚಿಸಿ , ತಾತ್ಕಾಲಿಕವಾಗಿ ಚಳುವಳಿ ಕೈ ಬಿಡಲು ತೀರ್ಮಾನಿಸಲಾಯಿತು ಸರ್ಕಾರದ ನಿರ್ಧಾರ ಬಾರದಿದ್ದರೆ 21ರಿಂದ ಬೆಂಗಳೂರಿನಲ್ಲಿ ರಾಜ್ಯದ ಕಬ್ಬು ಬೆಳೆಗಾರ ಸಂಘಟನೆಯ ಪದಾಧಿಕಾರಿಗಳು ರೈತರು ನಿರಂತರ ಧರಣಿ ನಡೆಸಲು ತೀರ್ಮಾನಿಸಲಾಗದೆ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದರು

ರಾಜ್ಯದ ಕಬ್ಬು ಬೆಳೆಗಾರ ರೈತರು ಹಲವು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ 10 ದಿನಗಳಿಂದ ನಿರಂತರ ಆವೂ ರಾತ್ರಿ ಧರಣಿ ನಡೆಸುತ್ತಿದ್ದಾರೆ ಆ ರೈತರ ಪರವಾದ ಒತ್ತಾಯಗಳು

ಕಬ್ಬಿನ ಉತ್ಪಾದನಾ ವೆಚ್ಚ 20ರಷ್ಟು ಏರಿಕೆಯಾಗಿದೆ ರಸಗೊಬ್ಬರ, ಡೀಸೆಲ್ ಬೀಜ, ಕೂಲಿ ಸಾಗಾಣಿಕೆ ಏರಿಕೆಯಾಗಿದೆ, ಕೇಂದ್ರ ಸರ್ಕಾರ ನಿಗದಿ ಮಾಡಿರುವ ಎಫ್ ಆರ್ ಪಿ ಬೆಲೆ, ಇಳುವರಿ ಆಧಾರ ಪರಿಗಣಿಸುವ ಕಾರಣ ರೈತರಿಗೆ ಕಳೆದ ವರ್ಷಕ್ಕಿಂತ ಪ್ರತಿ ಟನ್ಗೆ ಸರಾಸರಿ 50ರೂ ರಷ್ಟು ಕಡಿಮೆ ಹಣ ಸಿಗುತ್ತಿದೆ ಈ ಅನ್ಯಾಯ ಸರಿಪಡಿಸಬೇಕು

ಕಬ್ಬಿನ ಎಫ್ ಆರ್ ಪಿ ದರ ಹೆಚ್ಚುವರಿ ಮಾಡಬೇಕು ಕನಿಷ್ಠ 3500 ಎಫ್‌ಆರ್‌ಪಿ ಕನಿಷ್ಟ ದರ ನಿಗದಿಯಾಗಬೇಕು, ಅಥವಾ ರಾಜ್ಯ ಸಲಹಾ ಬೆಲೆ SAP ನಿಗದಿ ಮಾಡಬೇಕು. ಕಬ್ಬು ಕಟಾವು ಸಾಗಾಣಿಕೆ ವೆಚ್ಚ ಕಳೆದ ವರ್ಷಕ್ಕಿಂತ 250- 300 ಏರಿಕೆ ಕಾರಣ ಕಬ್ಬಿನ ಉಪ ಉತ್ಪನ್ನಗಳ ಲಾಭ, ಯಥನಾಲ್ ಲಾಭ ಸೇರಿಸಿ ಹೆಚ್ಚುವರಿ ರಾಜ್ಯ ಸಲಹಾ ಬೆಲೆ ನಿಗಧಿ ಮಾಡಬೇಕು,

ಕಬ್ಬಿನ ಕಟಾವು ವಿಳಂಬ ಮಾಡುವ ಕಾರ್ಖಾನೆಗಳು ಕಟಾವಿನ ವಿಳಂಬದ ಅವಧಿಗೆ, ನಾಲ್ಕೈದು ತಿಂಗಳ ಅವಧಿಗೆ, ಶೇಕಡ 15ರಷ್ಟು ಹೆಚ್ಚುವರಿ ಬಡ್ಡಿ ಸೇರಿಸಿ ಕೊಡಬೇಕು ಇದರಿಂದ ರೈತರಿಗೆ ತೂಕದಲ್ಲಿ ,ಇಳುವರಿಯಲ್ಲಿ, ಸಾಲದ ಬಡ್ಡಿ ಪಾವತಿಯಲ್ಲಿ ನಷ್ಟವಾಗುವುದು ತಪ್ಪುತ್ತದೆ, ಕಟಾವು ಕೂಲಿಕಾರರು ಸರ್ಕಾರ ನಿಗದಿ ಮಾಡಿದ ಹಣಕ್ಕಿಂತ ರೈತರಿಂದ ಹೆಚ್ಚುವರಿ ಹಣ ವಸೂಲಿ ಮಾಡುವ ಸಂದರ್ಭದಲ್ಲಿ, ಆಯಾ ಕಾರ್ಖಾನೆಗಳನ್ನು ಜವಾಬ್ದಾರಿ ಮಾಡಿ ಕಾರ್ಖಾನೆಗಳಿಂದ ವಸೂಲಿ ಮಾಡಿ ವಾಪಸ್ ರೈತರಿಗೆ ಕೊಡಿಸಬೇಕು

ಉತ್ತರ ಪ್ರದೇಶದಲ್ಲಿ ಪ್ರತಿ ಟನ್ ಗೆ 3500, ಪಂಜಾಬ್ ರಾಜ್ಯದಲ್ಲಿ 3800 ನಿಗದಿ ಮಾಡಿದ್ದಾರೆ

ಆಂಧ್ರಪ್ರದೇಶದಲ್ಲಿ 9.5 ಇಳುವರಿ ಬರುವ ಕಬ್ಬಿಗೆ ಎಫ್ ಆರ್ ಪಿ ದರಕ್ಕಿಂತ ಹೆಚ್ಚುವರಿಗಾಗಿ 300 ರೂ ನಿಗದಿ ಮಾಡಿ ರೈತರಿಗೆ ಕೂಡಿಸುತ್ತಾರೆ, ಅದೇ ರೀತಿ ರಾಜ್ಯದಲ್ಲಿ ಹೆಚ್ಚು ಇಳುವರಿರುವ ಕಾರಣ ಕನಿಷ್ಠ 500 ಗಳು ಹೆಚ್ಚುವರಿಯಾಗಿ ನಿಗದಿ ಮಾಡಬೇಕು

ತಮಿಳುನಾಡಿನಲ್ಲಿ ಕಬ್ಬು ಸಾಗಾಣಿಕೆ ವೆಚ್ಚವನ್ನು ಸಕ್ಕರೆ ಕಾರ್ಖಾನೆಗಳೆ ಸಂಪೂರ್ಣವಾಗಿ ಭರಿಸುತ್ತವೆ, ಹಾಗೂ ರಾಜ್ಯ ಸರ್ಕಾರ ಪ್ರತಿ ಟೆನ್ಗೆ 190ರೂ ಗಳನ್ನು ರೈತರ ಖಾತೆಗೆ ಸಹಾಯಧನ ನೇರವಾಗಿ ನೀಡುತ್ತದೆ ಇದನ್ನು ಪರಿಗಣಿಸಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು

ತೆಲಂಗಾಣ ರಾಜ್ಯದಲ್ಲಿ ಪ್ರತಿ ಎಕರೆ ಕಬ್ಬು ಬೆಳೆಯಲು 5,000 ಸಹಾಯಧನ ನೀಡುತ್ತಾರೆ, ಟನ್ ಕಬ್ಬಿಗೆ 3150 ನಿಗದಿ ಮಾಡಿದೆ,

ಸಕ್ಕರೆ ಕಾರ್ಖಾನೆಗಳ ಮಾಲೀಕರೇ ಕಟಾವು ಕೂಲಿಕಾರರನ್ನು ಕರೆದುಕೊಂಡು ಬರುವ ಕಾರಣ ಲಾರಿ ಟ್ರ್ಯಾಕ್ಟರ್ ಮಾಲೀಕರು, ಅವರ ಅಧೀನದಲ್ಲಿ ಇರುವ ಕಾರಣ, ರಾಜ್ಯಾದ್ಯಂತ ಏಕ ರೀತಿಯಲ್ಲಿ ಕಟಾವು ಸಾಗಾಣಿಕೆ ಹೊಣೆಯನ್ನು ಸಂಪೂರ್ಣವಾಗಿ ಕಾರ್ಖಾನೆಗಳಿಗೆ ವಹಿಸಬೇಕು, ರೈತರ ಹೊಲದಲ್ಲಿನ ದರ ಎಂದು ನಿಗದಿಪಡಿಸಬೇಕು, ಇದರಿಂದ ತೂಕದಲ್ಲಿ ಮೋಸ, ಸಕ್ಕರೆ ಇಳುವರಿಯಲ್ಲಿ ಮೋಸ, ಕಟಾವು ಸಾಗಾಣಿಕೆಯಲ್ಲಿ ಮೋಸ ವಿಳಂಬ ತಪ್ಪುತ್ತದೆ,

ಕಬ್ಬಿನ ಬಿತ್ತನೆ, ದ್ವಿಪಕ್ಷಿಯ ಒಪ್ಪಂದ, ಜೇಷ್ಠತೆ ಆಧಾರದ ಕಟಾವು, ಕಬ್ಬಿನ ತೂಕ, ಹಣ ಪಾವತಿ, ಸಕ್ಕರೆ ಇಳುವರಿ, ಡಿಜಿಟಲಿಕರಣಗೂಳಿಸ ಬೇಕು, ಇದರಿಂದ ರೈತರಿಗೆ ಮೋಸವಾಗುವುದು ತಪ್ಪುತ್ತದೆ,

ಇಂದಿನ ಸಭೆಯಲ್ಲಿ ಮೇಲಿನ ಒತ್ತಾಯಗಳ ಬಗ್ಗೆ ರಾಜ್ಯ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು ಒತ್ತಾಯಿಸಲಾಗಿದೆ, ಆದರೆ ರಾಜ್ಯ ಸರ್ಕಾರ ನಾಲ್ಕು ಬಾರಿ ಸಭೆ ನಡೆಸಿದರು ಯಾವುದೇ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ ರೈತರು ಬೇಸರಗೊಂಡಿದ್ದಾರೆ, ರಾಜ್ಯದ್ಯಂತ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕಳೆದ 10 ದಿನಗಳಿಂದ ನಿರಂತರ ಆಹೂ ರಾತ್ರಿ ಧರಣಿ ನಡೆಸುತ್ತಿದ್ದಾರೆ ಇದನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರದ ನಿರ್ಧಾರ ಪ್ರಕಟಣೆಯಾಗಬೇಕು ಎಂದು ರಾಜ್ಯದ ಕಬ್ಬು ಬೆಳೆಗಾರರ ಪರವಾಗಿ ರಾಜ್ಯಾಧ್ಯಕ್ಷರು ಒತ್ತಾಯಿಸಿದರು ಸಭೆಯಲ್ಲಿ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ,
ಕಬ್ಬು ಅಭಿವೃದ್ಧಿ ಆಯುಕ್ತರು ಶಿವಾನಂದ ಕೆಲಗೇರಿ, ರೈತ ಪ್ರತಿನಿಧಿ ಸಿದ್ದುಗೌಡ ಮೋದಗಿ, ಬಸವರಾಜ್,
ಮಂಡ್ಯ ವೆಂಕಟೇಶ್, ಬೆಳವಣಿಗೆ ಬಸಪ್ಪ, ಮುಂತಾದವರಿದ್ದರು

 

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

3 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

3 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

3 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

3 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

3 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

3 hours ago