ನವದೆಹಲಿ: ಲೋಕಸಭೆಯಲ್ಲಿ ಬುಧವಾರ ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದ ಚರ್ಚೆಯಲ್ಲಿ ವಿರೋಧ ಪಕ್ಷದಿಂದ ಮೊದಲಿಗರಾಗಿ ಮಾತನಾಡಿದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಪಕ್ಷವು ಮಹಿಳಾ ಮೀಸಲಾತಿ ಮಸೂದೆಯನ್ನುಬೆಂಬಲಿಸುತ್ತದೆ, ಆದರೆ ಮಹಿಳೆಯರಿಗೆ 33 ಶೇ. ಕೋಟಾದೊಳಗೆ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದರು.
“ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸುವಲ್ಲಿ ಯಾವುದೇ ವಿಳಂಬವು ಭಾರತೀಯ ಮಹಿಳೆಯರಿಗೆ ಎಸಗುವ ಘೋರ ಅನ್ಯಾಯವಾಗಿದೆ. ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣವೇ ಜಾರಿಗೊಳಿಸುವ ಮೂಲಕ ಅಗತ್ಯ ಮಾತ್ರವಲ್ಲದೆ ಸಾಧ್ಯವಿರುವ ಎಲ್ಲಾ ಅಡೆತಡೆಗಳನ್ನು ನಿವಾರಿಸಿ” ಎಂದು ಹೇಳಿದರು.
“ಇದು ನನ್ನ ಸ್ವಂತ ಜೀವನದ ಭಾವನಾತ್ಮಕ ಕ್ಷಣವಾಗಿದೆ. ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ನಿರ್ಧರಿಸಲು ಸಾಂವಿಧಾನಿಕ ತಿದ್ದುಪಡಿಯನ್ನು ನನ್ನ ಜೀವನ ಸಂಗಾತಿ ರಾಜೀವ್ ಗಾಂಧಿ ತಂದರು. ಅದನ್ನು ರಾಜ್ಯಸಭೆಯಲ್ಲಿ 7 ಮತಗಳಿಂದ ಸೋಲಿಸಲಾಯಿತು . ನಂತರ, ಪಿ.ವಿ. ನರಸಿಂಹರಾವ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರವು ರಾಜ್ಯಸಭೆಯಲ್ಲಿ ಅಂಗೀಕರಿಸಿತು. ಇದರ ಪರಿಣಾಮವಾಗಿ, ನಾವು ದೇಶಾದ್ಯಂತ ಸ್ಥಳೀಯ ಸಂಸ್ಥೆಗಳ ಮೂಲಕ ಚುನಾಯಿತರಾದ 15 ಲಕ್ಷ ಮಹಿಳಾ ನಾಯಕಿರನ್ನು ಹೊಂದಿದ್ದೇವೆ. ರಾಜೀವ್ ಗಾಂಧಿಯವರ ಕನಸು ಭಾಗಶಃ ಮಾತ್ರ ಪೂರ್ಣಗೊಂಡಿದೆ. ಈ ಮಸೂದೆಯ ಅಂಗೀಕಾರದೊಂದಿಗೆ ಅದು ಪೂರ್ಣಗೊಳ್ಳುತ್ತದೆ’’ಎಂದು ಸೋನಿಯಾ ಗಾಂಧಿ ತಮ್ಮ ಭಾಷಣದಲ್ಲಿ ಹೇಳಿದರು.
“ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪರವಾಗಿ, ನಾನು ಇಲ್ಲಿ ನಾರಿ ಶಕ್ತಿ ವಂದನ್ ಅಧಿನಿಯಮ್ ಅನ್ನು ಬೆಂಬಲಿಸುತ್ತೇನೆ. ಹೊಗೆಯಿಂದ ತುಂಬಿದ ಅಡುಗೆಮನೆಯಿಂದ ಫ್ಲಡ್-ಲೈಟ್ ಸ್ಟೇಡಿಯಂಗಳವರೆಗೆ, ಭಾರತೀಯ ಮಹಿಳೆಯ ಪ್ರಯಾಣವು ಸುದೀರ್ಘವಾಗಿದೆ. ಆದರೆ ಆಕೆ ಅಂತಿಮವಾಗಿ ತನ್ನ ಗಮ್ಯಸ್ಥಾನವನ್ನು ತಲುಪಿದ್ದಾಳೆ ಎಂದು ಹಿಂದಿಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ ಹೇಳಿದರು.
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…