BREAKING NEWS

ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿಗಳನ್ನು ಸೇರಿಸಬೇಕು: ಸೋನಿಯಾ ಗಾಂಧಿ ಆಗ್ರಹ

ನವದೆಹಲಿ: ಲೋಕಸಭೆಯಲ್ಲಿ ಬುಧವಾರ ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದ ಚರ್ಚೆಯಲ್ಲಿ ವಿರೋಧ ಪಕ್ಷದಿಂದ ಮೊದಲಿಗರಾಗಿ ಮಾತನಾಡಿದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಪಕ್ಷವು ಮಹಿಳಾ ಮೀಸಲಾತಿ ಮಸೂದೆಯನ್ನುಬೆಂಬಲಿಸುತ್ತದೆ, ಆದರೆ ಮಹಿಳೆಯರಿಗೆ 33 ಶೇ. ಕೋಟಾದೊಳಗೆ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದರು.

“ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸುವಲ್ಲಿ ಯಾವುದೇ ವಿಳಂಬವು ಭಾರತೀಯ ಮಹಿಳೆಯರಿಗೆ ಎಸಗುವ ಘೋರ ಅನ್ಯಾಯವಾಗಿದೆ. ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣವೇ ಜಾರಿಗೊಳಿಸುವ ಮೂಲಕ ಅಗತ್ಯ ಮಾತ್ರವಲ್ಲದೆ ಸಾಧ್ಯವಿರುವ ಎಲ್ಲಾ ಅಡೆತಡೆಗಳನ್ನು ನಿವಾರಿಸಿ” ಎಂದು ಹೇಳಿದರು.

“ಇದು ನನ್ನ ಸ್ವಂತ ಜೀವನದ ಭಾವನಾತ್ಮಕ ಕ್ಷಣವಾಗಿದೆ. ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ನಿರ್ಧರಿಸಲು ಸಾಂವಿಧಾನಿಕ ತಿದ್ದುಪಡಿಯನ್ನು ನನ್ನ ಜೀವನ ಸಂಗಾತಿ ರಾಜೀವ್ ಗಾಂಧಿ ತಂದರು. ಅದನ್ನು ರಾಜ್ಯಸಭೆಯಲ್ಲಿ 7 ಮತಗಳಿಂದ ಸೋಲಿಸಲಾಯಿತು . ನಂತರ, ಪಿ.ವಿ. ನರಸಿಂಹರಾವ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರವು ರಾಜ್ಯಸಭೆಯಲ್ಲಿ ಅಂಗೀಕರಿಸಿತು. ಇದರ ಪರಿಣಾಮವಾಗಿ, ನಾವು ದೇಶಾದ್ಯಂತ ಸ್ಥಳೀಯ ಸಂಸ್ಥೆಗಳ ಮೂಲಕ ಚುನಾಯಿತರಾದ 15 ಲಕ್ಷ ಮಹಿಳಾ ನಾಯಕಿರನ್ನು ಹೊಂದಿದ್ದೇವೆ. ರಾಜೀವ್ ಗಾಂಧಿಯವರ ಕನಸು ಭಾಗಶಃ ಮಾತ್ರ ಪೂರ್ಣಗೊಂಡಿದೆ. ಈ ಮಸೂದೆಯ ಅಂಗೀಕಾರದೊಂದಿಗೆ ಅದು ಪೂರ್ಣಗೊಳ್ಳುತ್ತದೆ’’ಎಂದು ಸೋನಿಯಾ ಗಾಂಧಿ ತಮ್ಮ ಭಾಷಣದಲ್ಲಿ ಹೇಳಿದರು.

“ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪರವಾಗಿ, ನಾನು ಇಲ್ಲಿ ನಾರಿ ಶಕ್ತಿ ವಂದನ್ ಅಧಿನಿಯಮ್ ಅನ್ನು ಬೆಂಬಲಿಸುತ್ತೇನೆ. ಹೊಗೆಯಿಂದ ತುಂಬಿದ ಅಡುಗೆಮನೆಯಿಂದ ಫ್ಲಡ್-ಲೈಟ್ ಸ್ಟೇಡಿಯಂಗಳವರೆಗೆ, ಭಾರತೀಯ ಮಹಿಳೆಯ ಪ್ರಯಾಣವು ಸುದೀರ್ಘವಾಗಿದೆ. ಆದರೆ ಆಕೆ ಅಂತಿಮವಾಗಿ ತನ್ನ ಗಮ್ಯಸ್ಥಾನವನ್ನು ತಲುಪಿದ್ದಾಳೆ ಎಂದು ಹಿಂದಿಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ ಹೇಳಿದರು.

andolanait

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

8 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

9 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

10 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

11 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

11 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

12 hours ago