BREAKING NEWS

ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿಗಳನ್ನು ಸೇರಿಸಬೇಕು: ಸೋನಿಯಾ ಗಾಂಧಿ ಆಗ್ರಹ

ನವದೆಹಲಿ: ಲೋಕಸಭೆಯಲ್ಲಿ ಬುಧವಾರ ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದ ಚರ್ಚೆಯಲ್ಲಿ ವಿರೋಧ ಪಕ್ಷದಿಂದ ಮೊದಲಿಗರಾಗಿ ಮಾತನಾಡಿದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಪಕ್ಷವು ಮಹಿಳಾ ಮೀಸಲಾತಿ ಮಸೂದೆಯನ್ನುಬೆಂಬಲಿಸುತ್ತದೆ, ಆದರೆ ಮಹಿಳೆಯರಿಗೆ 33 ಶೇ. ಕೋಟಾದೊಳಗೆ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದರು.

“ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸುವಲ್ಲಿ ಯಾವುದೇ ವಿಳಂಬವು ಭಾರತೀಯ ಮಹಿಳೆಯರಿಗೆ ಎಸಗುವ ಘೋರ ಅನ್ಯಾಯವಾಗಿದೆ. ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣವೇ ಜಾರಿಗೊಳಿಸುವ ಮೂಲಕ ಅಗತ್ಯ ಮಾತ್ರವಲ್ಲದೆ ಸಾಧ್ಯವಿರುವ ಎಲ್ಲಾ ಅಡೆತಡೆಗಳನ್ನು ನಿವಾರಿಸಿ” ಎಂದು ಹೇಳಿದರು.

“ಇದು ನನ್ನ ಸ್ವಂತ ಜೀವನದ ಭಾವನಾತ್ಮಕ ಕ್ಷಣವಾಗಿದೆ. ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ನಿರ್ಧರಿಸಲು ಸಾಂವಿಧಾನಿಕ ತಿದ್ದುಪಡಿಯನ್ನು ನನ್ನ ಜೀವನ ಸಂಗಾತಿ ರಾಜೀವ್ ಗಾಂಧಿ ತಂದರು. ಅದನ್ನು ರಾಜ್ಯಸಭೆಯಲ್ಲಿ 7 ಮತಗಳಿಂದ ಸೋಲಿಸಲಾಯಿತು . ನಂತರ, ಪಿ.ವಿ. ನರಸಿಂಹರಾವ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರವು ರಾಜ್ಯಸಭೆಯಲ್ಲಿ ಅಂಗೀಕರಿಸಿತು. ಇದರ ಪರಿಣಾಮವಾಗಿ, ನಾವು ದೇಶಾದ್ಯಂತ ಸ್ಥಳೀಯ ಸಂಸ್ಥೆಗಳ ಮೂಲಕ ಚುನಾಯಿತರಾದ 15 ಲಕ್ಷ ಮಹಿಳಾ ನಾಯಕಿರನ್ನು ಹೊಂದಿದ್ದೇವೆ. ರಾಜೀವ್ ಗಾಂಧಿಯವರ ಕನಸು ಭಾಗಶಃ ಮಾತ್ರ ಪೂರ್ಣಗೊಂಡಿದೆ. ಈ ಮಸೂದೆಯ ಅಂಗೀಕಾರದೊಂದಿಗೆ ಅದು ಪೂರ್ಣಗೊಳ್ಳುತ್ತದೆ’’ಎಂದು ಸೋನಿಯಾ ಗಾಂಧಿ ತಮ್ಮ ಭಾಷಣದಲ್ಲಿ ಹೇಳಿದರು.

“ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪರವಾಗಿ, ನಾನು ಇಲ್ಲಿ ನಾರಿ ಶಕ್ತಿ ವಂದನ್ ಅಧಿನಿಯಮ್ ಅನ್ನು ಬೆಂಬಲಿಸುತ್ತೇನೆ. ಹೊಗೆಯಿಂದ ತುಂಬಿದ ಅಡುಗೆಮನೆಯಿಂದ ಫ್ಲಡ್-ಲೈಟ್ ಸ್ಟೇಡಿಯಂಗಳವರೆಗೆ, ಭಾರತೀಯ ಮಹಿಳೆಯ ಪ್ರಯಾಣವು ಸುದೀರ್ಘವಾಗಿದೆ. ಆದರೆ ಆಕೆ ಅಂತಿಮವಾಗಿ ತನ್ನ ಗಮ್ಯಸ್ಥಾನವನ್ನು ತಲುಪಿದ್ದಾಳೆ ಎಂದು ಹಿಂದಿಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ ಹೇಳಿದರು.

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

7 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

8 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

8 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

10 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

10 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

14 hours ago